ದೇಶ- ವಿದೇಶ

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಇಸ್ರೋ: ಜಿಎಸ್‌ಎಲ್‌ವಿ ರಾಕೆಟ್‌ ಉಡಾವಣೆ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ.

ಇಂದು ಬೆಳಿಗ್ಗೆ 100ನೇ ರಾಕೆಟ್‌ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಇಸ್ರೋ ವಿಶಿಷ್ಟ ಸಾಧನೆ ಮಾಡಿದೆ.

ಇಂದು ಬೆಳಿಗ್ಗೆ 6.30ಕ್ಕೆ ಆಂಧ್ರಪ್ರದೇಶದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಜಿಯೋಸಿಂಕ್ರನೈಸ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌ ಮೂಲಕ ನಾವಿಕ್‌ ಯೋಜನೆಯ ಎರಡನೇ ತಲೆಮಾರಿನ ಉಪಗ್ರಹ ಎನ್‌ವಿಎಸ್‌-02 ಉಡಾವಣೆಯನ್ನು ಯಶಸ್ವಿಗೊಳಿಸಿದೆ.

ಉಪಗ್ರಹ ಉಡಾವಣೆಯಾದ ಬಳಿಕ ಮಾತನಾಡಿದ ಇಸ್ರೋ ಮುಖ್ಯಸ್ಥ ನಾರಾಯಣನ್‌ ಅವರು, ನಿಗದಿ ಪಡಿಸಿದ ಕಕ್ಷೆಗೆ ಉಪಗ್ರಹ ನಿಖರವಾಗಿ ತಲುಪಿದೆ. 100ನೇ ಉಡಾವಣೆ ಇಸ್ರೋ ಪಾಲಿಗೆ ಮಹತ್ವದ ಮೈಲಿಗಲ್ಲು ಎಂದು ಸಂತಸ ವ್ಯಕ್ತಪಡಿಸಿದರು.

ಎನ್‌ವಿಎಸ್-೦೨ ಉಪಗ್ರಹದ ವೈಶಿಷ್ಟ್ಯಗಳು:

ಎನ್‌ವಿಎಸ್-೦೨ ಉಪಗ್ರಹವು ಎರಡನೇ ತಲೆಮಾರಿನ ನ್ಯಾವಿಕ್ ಉಪಗ್ರಹಗಳ ಭಾಗವಾಗಿದ್ದು, ೧-೨ಕೆ ಬಸ್ ಪ್ಲಾಟ್‌ಫಾರ್ಮ್ ಅನ್ನು ಬಳಸುತ್ತದೆ. ಈ ಉಪಗ್ರಹ ೨,೨೫೦ ಕೆಜಿ ತೂಕವಿದ್ದು, ಸುಮಾರು ೩ ಕಿ.ವ್ಯಾಟ್ ವಿದ್ಯುತ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಎಲ್೧, ಎಲ್೫ ಮತ್ತು ಎಸ್ ಬ್ಯಾಂಡ್ ಗಳಲ್ಲಿ ನ್ಯಾವಿಗೇಷನ್ ಪೇಲೋಡ್‌ಗಳನ್ನು ಮತ್ತು ಅ-ಬ್ಯಾಂಡ್‌ನಲ್ಲಿ ರೇಂಡಿಂಗ್ ಪೇಲೋಡ್ ಅನ್ನು ಹೊಂದಿರುತ್ತದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

18 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

18 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

18 hours ago