ದೇಶ- ವಿದೇಶ

ಐತಿಹಾಸಿಕ ಮೈಲಿಗಲ್ಲಿನತ್ತ ದಾಪುಗಾಲಿಟ್ಟ ಇಸ್ರೋ

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ತನ್ನ ಮಹತ್ವಾಕಾಂಕ್ಷೆ ಯೋಜನೆ ಸ್ಪಾಡೆಕ್ಸ್‌ (SpaDeX) ಉಪಗ್ರಹಗಳ ಪ್ರಾಯೋಗಿಕ ಜೋಡಣೆಯ ಪ್ರಯತ್ನ ಮಾಡುವ ಮುಖಾಂತರ ಬಾಹ್ಯಾಕಾಶ ಡಾಕಿಂಗ್‌ ತಂತ್ರಜ್ಞಾನವನ್ನು ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗುವತ್ತ ದಾಪುಗಾಲಿಟ್ಟಿದೆ.

ಈ ಬಗ್ಗೆ ʼಎಕ್ಸ್‌ʼ ನಲ್ಲಿ ಟ್ವೀಟ್‌ ಮಾಡಿರುವ ಇಸ್ರೋ, ಬಾಹ್ಯಾಕಾಶದಲ್ಲಿ ಜೋಡಣೆ ಪ್ರಯತ್ನಕ್ಕಾಗಿ ಉಡಾವಣೆ ಮಾಡಿರುವ ಎರಡು ಉಪಗ್ರಹಗಳನ್ನು 3 ಮೀಟರ್‌ ಅಂತರಕ್ಕೆ ತಂದು ಜೋಡಣೆಯ ಪ್ರಾಯೋಗಿಕ ಪ್ರಯತ್ನ ನಡೆಸಲಾಗಿದೆ. ನಂತರ ನೌಕೆಗಳನ್ನು ಸುರಕ್ಷಿತವಾಗಿ ಹಿಂದಕ್ಕೆ ಸರಿಸಿ ಕಾರ್ಯಾಚರಣೆಯ ದತ್ತಾಂಶ ವಿಶ್ಲೇಷಿಸಿದ ನಂತರ ಡಾಕಿಂಗ್‌ ಪ್ರಕ್ರಿಯೆ ಮಾಡಲಾಗುತ್ತದೆ ಎಂದು ಇಸ್ರೋ ತಿಳಿಸಿದೆ.

ಸಣ್ಣ ಬಾಹ್ಯಾಕಾಶ ನೌಕೆಗಳನ್ನು ಬಳಸಿಕೊಂಡು ಜೋಡಣೆ ಮಾಡುವ ಈ ಪ್ರಯೋಗವು ಭವಿಷ್ಯದಲ್ಲಿ ಕಡಿಮೆ ವೆಚ್ಚದಲ್ಲಿ ಉನ್ನತ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಮಿಷನ್‌ಗಳಿಗೆ ಸಹಾಯವಾಗಲಿದೆ.

ಸಾಮಾನ್ಯ ಮಿಷನ್‌ ಉದ್ದೇಶಗಳನ್ನು ಸಾಧಿಸಲು ಬಹು ರಾಕೆಟ್‌ ಉಡಾವಣೆಗಳ ಅಗತ್ಯವಿರುವಾಗ ಬಾಹ್ಯಾಕಾಶದಲ್ಲಿ ಡಾಕಿಂಗ್‌ ತಂತ್ರಜ್ಞಾನವು ತುಂಬಾ ಮುಖ್ಯವಾಗಿರುತ್ತದೆ. ಇದನ್ನು ಸಾಧಿಸಲು ಈ ಯೋಜನೆ ಪ್ರಮುಖವಾಗಿದೆ ಎಂದು ಇಸ್ರೋ ಹೇಳಿದೆ.

ಸ್ಪಾಡೆಕ್ಸ್‌ ಮಿಷನ್‌ನ ಪ್ರಾಥಮಿಕ ಉದ್ದೇಶವು ಕಡಿಮೆ ಅಂತರವಿರುವ ಭೂಮಿಯ ವೃತ್ತಾಕಾರದ ಕಕ್ಷೆಯಲ್ಲಿ ಎರಡು ಸಣ್ಣ ಬಾಹ್ಯಾಕಾಶ ನೌಕೆಗಳ (SDX01-ಚೇಸರ್‌ ಮತ್ತು SDX02-ಟಾರ್ಗೆಟ್‌) ಸಂಧಿಸುವಿಕೆ, ಡಾಕಿಂಗ್‌, ಅನ್‌ಡಾಕಿಂಗ್‌ಗೆ ಅಗತ್ಯವಿರುವ ತಂತ್ರಜ್ಞಾನ ಅಭಿವೃದ್ದಿಪಡಿಸುವುದಾಗಿದೆ. ಡಾಕಿಂಗ್‌ ಮಾಡಿದ ನೌಕೆಯ ನಡುವೆ ವಿದ್ಯುತ್‌ ಶಕ್ತಿ ವರ್ಗಾವಣೆ ಆಗುತ್ತದೆಯೇ ಎಂಬುವುದನ್ನು ತಿಳಿಯುವ ಉದ್ದೇಶವಿದೆ. ಬಾಹ್ಯಾಕಾಶದಲ್ಲಿ ರೋಬೋಟಿಕ್ಸ್‌, ಸಂಯೋಜಿತ ಬಾಹ್ಯಾಕಾಶ ನೌಕೆ ನಿಯಂತ್ರಣ ಮತ್ತು ಅನ್‌ಡಾಕ್‌ ಮಾಡಿದ ನಂತರ ಪೆಲೋಡ್‌ ಕಾರ್ಯಾಚರಣೆಗಳ ಭವಿಷ್ಯ ಯೋಜನೆಗಳಿಗೆ ಇದು ಸಹಕಾರಿಯಾಗಲಿದೆ.

ಇನ್ನು ಈ ಯೋಜನೆಯು ಬಾಹ್ಯಾಕಾಶದ ಹಲವಾರು ಮಿಷನ್‌ಗಳಿಗೆ ಗಗನಯಾತ್ರಿಗಳನ್ನು ಇಳಿಸುವ ಭವಿಷ್ಯದ ಕಾರ್ಯಾಚರಣೆಗಳಿಗೆ ನಿರ್ಣಾಯಕ ತಂತ್ರಜ್ಞಾನ ಒದಗಿಸಲು ದೇಶಕ್ಕೆ ನೆರವಾಗಲಿದೆ ಎಂದು ಇಸ್ರೋ ತಿಳಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

19 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

20 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

20 hours ago