ನವದೆಹಲಿ: ಕೇಂದ್ರ ಸರ್ಕಾರವು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ.ನಾರಾಯಣನ್ ಆಯ್ಕೆಯಾಗಿದ್ದಾರೆ.
ಇಸ್ರೋದ ಪ್ರಸ್ತುತ ಮುಖ್ಯಸ್ಥ ಎಸ್.ಸೋಮನಾಥ್ ಅವರ ಅಧಿಕಾರವಧಿ 2 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜನವರಿ.14 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿಯ ನಂತರ ವಿ.ನಾರಾಯಣನ್ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ.
ದೇಶದ ಹಿರಿಯ ಗಗನಯಾತ್ರಿ ಹಾಗೂ ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಅವರು ಜನವರಿ.14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥರಾಗಿರುವ ಎಸ್.ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳಲಿದ್ದಾರೆ. ಇವರ ಅವಧಿ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ. ವಿ.ನಾರಾಯಣನ್ ಅವರಿಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ.
ನಾರಾಯಣನ್ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್ಪಿಎಸ್ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್(ಎಲ್ಪಿಎಸ್ಸಿ) ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 1984ರಲ್ಲಿ ನಾರಾಯಣನ್ ಅವರು ಇಸ್ರೋಗೆ ಸೇರ್ಪಡೆಯಾಗಿದ್ದು, ಆದಿತ್ಯ ಬಾಹ್ಯಾಕಾಶ ನೌಕೆ ಹಾಗೂ ಜಿಎಸ್ಎಲ್ವಿ ಎಂಕೆ-3 ಮಿಷನ್ನಂತಹ ಮುಖ್ಯ ಯೋಜನೆಗಳಿಗೆ ಗಮನಾರ್ಹ ಕೊಡುಗೆಯನ್ನು ನೀಡಿದ್ದರೆ. ಹೀಗಾಗಿ ನಾರಾಯಣನ್ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಅಲ್ಲದೇ ಭಾರತದ ಆಸ್ಟ್ರೋನಾಟಿಕಲ್ ಸೊಸೈಟಿಯಿಂದ ಶ್ರೀ ಪ್ರಶಸ್ತಿ ಹಾಗೂ ಐಐಟಿ ಖರಗ್ಪುರದಿಂದ ಡಿಸ್ಟಿಂಗ್ವಿಶ್ಡ್ ಅಲುಮ್ನಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…