ದೇಶ- ವಿದೇಶ

ಇಸ್ರೋ: ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿ.ನಾರಾಯಣನ್‌

ನವದೆಹಲಿ: ಕೇಂದ್ರ ಸರ್ಕಾರವು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ.ನಾರಾಯಣನ್‌ ಆಯ್ಕೆಯಾಗಿದ್ದಾರೆ.

ಇಸ್ರೋದ ಪ್ರಸ್ತುತ ಮುಖ್ಯಸ್ಥ ಎಸ್‌.ಸೋಮನಾಥ್‌ ಅವರ ಅಧಿಕಾರವಧಿ 2 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜನವರಿ.14 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿಯ ನಂತರ ವಿ.ನಾರಾಯಣನ್‌ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ.

ದೇಶದ ಹಿರಿಯ ಗಗನಯಾತ್ರಿ ಹಾಗೂ ಕ್ರಯೋಜೆನಿಕ್‌ ಎಂಜಿನ್‌ ತಜ್ಞ ವಿ.ನಾರಾಯಣನ್‌ ಅವರು ಜನವರಿ.14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥರಾಗಿರುವ ಎಸ್‌.ಸೋಮನಾಥ್‌ ಅವರಿಂದ ಅಧಿಕಾರ ವಹಿಸಿಕೊಳಲಿದ್ದಾರೆ. ಇವರ ಅವಧಿ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ. ವಿ.ನಾರಾಯಣನ್‌ ಅವರಿಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ.

ನಾರಾಯಣನ್‌ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್‌ಪಿಎಸ್‌ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್‌ ಪ್ರೊಪಲ್ಷನ್‌ ಸಿಸ್ಟಮ್‌ ಸೆಂಟರ್‌(ಎಲ್‌ಪಿಎಸ್‌ಸಿ) ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 1984ರಲ್ಲಿ ನಾರಾಯಣನ್‌ ಅವರು ಇಸ್ರೋಗೆ ಸೇರ್ಪಡೆಯಾಗಿದ್ದು, ಆದಿತ್ಯ ಬಾಹ್ಯಾಕಾಶ ನೌಕೆ ಹಾಗೂ ಜಿಎಸ್‌ಎಲ್‌ವಿ ಎಂಕೆ-3 ಮಿಷನ್‌ನಂತಹ ಮುಖ್ಯ ಯೋಜನೆಗಳಿಗೆ ಗಮನಾರ್ಹ ಕೊಡುಗೆಯನ್ನು ನೀಡಿದ್ದರೆ. ಹೀಗಾಗಿ ನಾರಾಯಣನ್‌ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಅಲ್ಲದೇ ಭಾರತದ ಆಸ್ಟ್ರೋನಾಟಿಕಲ್‌ ಸೊಸೈಟಿಯಿಂದ ಶ್ರೀ ಪ್ರಶಸ್ತಿ ಹಾಗೂ ಐಐಟಿ ಖರಗ್‌ಪುರದಿಂದ ಡಿಸ್ಟಿಂಗ್ವಿಶ್ಡ್‌ ಅಲುಮ್ನಸ್‌ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

34 mins ago

ಇಂದು, ನಾಳೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

60 mins ago

ನೆತನ್ಯಾಹು 1 ಫೋನ್‌ ಕಾಲ್‌ ಎಲ್ಲವನ್ನೂ ಹಾಳು ಮಾಡಿತು: ಇರಾನ್‌ ಹೊಸ ಬಾಂಬ್‌

ಟೆಹರಾನ್:‌ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌…

1 hour ago

ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…

2 hours ago

ಓಂಕಾರ್ ವಲಯದಲ್ಲಿ ಹತೋಟಿಗೆ ಬಾರದ ಒಂಟಿ ಸಲಗದ ಉಪಟಳ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…

2 hours ago

ಬಂಡೀಪುರದಲ್ಲಿ ಸಫಾರಿಗರಿಗೆ ಹುಲಿ ದರ್ಶನ: ಜಿಂಕೆ ಬೇಟೆಯಾಡಿದ ಸೀಳು ನಾಯಿ

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…

2 hours ago