ನವದೆಹಲಿ: ಕೇಂದ್ರ ಸರ್ಕಾರವು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ.ನಾರಾಯಣನ್ ಆಯ್ಕೆಯಾಗಿದ್ದಾರೆ.
ಇಸ್ರೋದ ಪ್ರಸ್ತುತ ಮುಖ್ಯಸ್ಥ ಎಸ್.ಸೋಮನಾಥ್ ಅವರ ಅಧಿಕಾರವಧಿ 2 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜನವರಿ.14 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿಯ ನಂತರ ವಿ.ನಾರಾಯಣನ್ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ.
ದೇಶದ ಹಿರಿಯ ಗಗನಯಾತ್ರಿ ಹಾಗೂ ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಅವರು ಜನವರಿ.14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥರಾಗಿರುವ ಎಸ್.ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳಲಿದ್ದಾರೆ. ಇವರ ಅವಧಿ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ. ವಿ.ನಾರಾಯಣನ್ ಅವರಿಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ.
ನಾರಾಯಣನ್ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್ಪಿಎಸ್ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್(ಎಲ್ಪಿಎಸ್ಸಿ) ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 1984ರಲ್ಲಿ ನಾರಾಯಣನ್ ಅವರು ಇಸ್ರೋಗೆ ಸೇರ್ಪಡೆಯಾಗಿದ್ದು, ಆದಿತ್ಯ ಬಾಹ್ಯಾಕಾಶ ನೌಕೆ ಹಾಗೂ ಜಿಎಸ್ಎಲ್ವಿ ಎಂಕೆ-3 ಮಿಷನ್ನಂತಹ ಮುಖ್ಯ ಯೋಜನೆಗಳಿಗೆ ಗಮನಾರ್ಹ ಕೊಡುಗೆಯನ್ನು ನೀಡಿದ್ದರೆ. ಹೀಗಾಗಿ ನಾರಾಯಣನ್ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಅಲ್ಲದೇ ಭಾರತದ ಆಸ್ಟ್ರೋನಾಟಿಕಲ್ ಸೊಸೈಟಿಯಿಂದ ಶ್ರೀ ಪ್ರಶಸ್ತಿ ಹಾಗೂ ಐಐಟಿ ಖರಗ್ಪುರದಿಂದ ಡಿಸ್ಟಿಂಗ್ವಿಶ್ಡ್ ಅಲುಮ್ನಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…