ನವದೆಹಲಿ: ಕೇಂದ್ರ ಸರ್ಕಾರವು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ.ನಾರಾಯಣನ್ ಆಯ್ಕೆಯಾಗಿದ್ದಾರೆ.
ಇಸ್ರೋದ ಪ್ರಸ್ತುತ ಮುಖ್ಯಸ್ಥ ಎಸ್.ಸೋಮನಾಥ್ ಅವರ ಅಧಿಕಾರವಧಿ 2 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜನವರಿ.14 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿಯ ನಂತರ ವಿ.ನಾರಾಯಣನ್ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ.
ದೇಶದ ಹಿರಿಯ ಗಗನಯಾತ್ರಿ ಹಾಗೂ ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಅವರು ಜನವರಿ.14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥರಾಗಿರುವ ಎಸ್.ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳಲಿದ್ದಾರೆ. ಇವರ ಅವಧಿ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ. ವಿ.ನಾರಾಯಣನ್ ಅವರಿಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ.
ನಾರಾಯಣನ್ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್ಪಿಎಸ್ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್(ಎಲ್ಪಿಎಸ್ಸಿ) ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 1984ರಲ್ಲಿ ನಾರಾಯಣನ್ ಅವರು ಇಸ್ರೋಗೆ ಸೇರ್ಪಡೆಯಾಗಿದ್ದು, ಆದಿತ್ಯ ಬಾಹ್ಯಾಕಾಶ ನೌಕೆ ಹಾಗೂ ಜಿಎಸ್ಎಲ್ವಿ ಎಂಕೆ-3 ಮಿಷನ್ನಂತಹ ಮುಖ್ಯ ಯೋಜನೆಗಳಿಗೆ ಗಮನಾರ್ಹ ಕೊಡುಗೆಯನ್ನು ನೀಡಿದ್ದರೆ. ಹೀಗಾಗಿ ನಾರಾಯಣನ್ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಅಲ್ಲದೇ ಭಾರತದ ಆಸ್ಟ್ರೋನಾಟಿಕಲ್ ಸೊಸೈಟಿಯಿಂದ ಶ್ರೀ ಪ್ರಶಸ್ತಿ ಹಾಗೂ ಐಐಟಿ ಖರಗ್ಪುರದಿಂದ ಡಿಸ್ಟಿಂಗ್ವಿಶ್ಡ್ ಅಲುಮ್ನಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…