ನವದೆಹಲಿ: ಕೇಂದ್ರ ಸರ್ಕಾರವು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ.ನಾರಾಯಣನ್ ಆಯ್ಕೆಯಾಗಿದ್ದಾರೆ.
ಇಸ್ರೋದ ಪ್ರಸ್ತುತ ಮುಖ್ಯಸ್ಥ ಎಸ್.ಸೋಮನಾಥ್ ಅವರ ಅಧಿಕಾರವಧಿ 2 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜನವರಿ.14 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿಯ ನಂತರ ವಿ.ನಾರಾಯಣನ್ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ.
ದೇಶದ ಹಿರಿಯ ಗಗನಯಾತ್ರಿ ಹಾಗೂ ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಅವರು ಜನವರಿ.14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥರಾಗಿರುವ ಎಸ್.ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳಲಿದ್ದಾರೆ. ಇವರ ಅವಧಿ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ. ವಿ.ನಾರಾಯಣನ್ ಅವರಿಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ.
ನಾರಾಯಣನ್ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್ಪಿಎಸ್ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್(ಎಲ್ಪಿಎಸ್ಸಿ) ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 1984ರಲ್ಲಿ ನಾರಾಯಣನ್ ಅವರು ಇಸ್ರೋಗೆ ಸೇರ್ಪಡೆಯಾಗಿದ್ದು, ಆದಿತ್ಯ ಬಾಹ್ಯಾಕಾಶ ನೌಕೆ ಹಾಗೂ ಜಿಎಸ್ಎಲ್ವಿ ಎಂಕೆ-3 ಮಿಷನ್ನಂತಹ ಮುಖ್ಯ ಯೋಜನೆಗಳಿಗೆ ಗಮನಾರ್ಹ ಕೊಡುಗೆಯನ್ನು ನೀಡಿದ್ದರೆ. ಹೀಗಾಗಿ ನಾರಾಯಣನ್ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಅಲ್ಲದೇ ಭಾರತದ ಆಸ್ಟ್ರೋನಾಟಿಕಲ್ ಸೊಸೈಟಿಯಿಂದ ಶ್ರೀ ಪ್ರಶಸ್ತಿ ಹಾಗೂ ಐಐಟಿ ಖರಗ್ಪುರದಿಂದ ಡಿಸ್ಟಿಂಗ್ವಿಶ್ಡ್ ಅಲುಮ್ನಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…