ದೇಶ- ವಿದೇಶ

ಇಸ್ರೋ: ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿ.ನಾರಾಯಣನ್‌

ನವದೆಹಲಿ: ಕೇಂದ್ರ ಸರ್ಕಾರವು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ.ನಾರಾಯಣನ್‌ ಆಯ್ಕೆಯಾಗಿದ್ದಾರೆ.

ಇಸ್ರೋದ ಪ್ರಸ್ತುತ ಮುಖ್ಯಸ್ಥ ಎಸ್‌.ಸೋಮನಾಥ್‌ ಅವರ ಅಧಿಕಾರವಧಿ 2 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜನವರಿ.14 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿಯ ನಂತರ ವಿ.ನಾರಾಯಣನ್‌ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ.

ದೇಶದ ಹಿರಿಯ ಗಗನಯಾತ್ರಿ ಹಾಗೂ ಕ್ರಯೋಜೆನಿಕ್‌ ಎಂಜಿನ್‌ ತಜ್ಞ ವಿ.ನಾರಾಯಣನ್‌ ಅವರು ಜನವರಿ.14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥರಾಗಿರುವ ಎಸ್‌.ಸೋಮನಾಥ್‌ ಅವರಿಂದ ಅಧಿಕಾರ ವಹಿಸಿಕೊಳಲಿದ್ದಾರೆ. ಇವರ ಅವಧಿ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ. ವಿ.ನಾರಾಯಣನ್‌ ಅವರಿಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ.

ನಾರಾಯಣನ್‌ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್‌ಪಿಎಸ್‌ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್‌ ಪ್ರೊಪಲ್ಷನ್‌ ಸಿಸ್ಟಮ್‌ ಸೆಂಟರ್‌(ಎಲ್‌ಪಿಎಸ್‌ಸಿ) ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 1984ರಲ್ಲಿ ನಾರಾಯಣನ್‌ ಅವರು ಇಸ್ರೋಗೆ ಸೇರ್ಪಡೆಯಾಗಿದ್ದು, ಆದಿತ್ಯ ಬಾಹ್ಯಾಕಾಶ ನೌಕೆ ಹಾಗೂ ಜಿಎಸ್‌ಎಲ್‌ವಿ ಎಂಕೆ-3 ಮಿಷನ್‌ನಂತಹ ಮುಖ್ಯ ಯೋಜನೆಗಳಿಗೆ ಗಮನಾರ್ಹ ಕೊಡುಗೆಯನ್ನು ನೀಡಿದ್ದರೆ. ಹೀಗಾಗಿ ನಾರಾಯಣನ್‌ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಅಲ್ಲದೇ ಭಾರತದ ಆಸ್ಟ್ರೋನಾಟಿಕಲ್‌ ಸೊಸೈಟಿಯಿಂದ ಶ್ರೀ ಪ್ರಶಸ್ತಿ ಹಾಗೂ ಐಐಟಿ ಖರಗ್‌ಪುರದಿಂದ ಡಿಸ್ಟಿಂಗ್ವಿಶ್ಡ್‌ ಅಲುಮ್ನಸ್‌ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago