ದೇಶ- ವಿದೇಶ

ಬೆಳ್ಳಂಬೆಳಗ್ಗೆ ನಭಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್‌

ಶ್ರೀಹರಿಕೋಟಾ : ಪಿಎಸ್‍ಎಲ್‍ವಿ ರಾಕೆಟ್ ಮೂಲಕ ಭೂಮಿಯ ಚಿತ್ರಣ ನೀಡುವ ಉಪಗ್ರಹದ ಉಡಾವಣೆಗೆ 7 ಗಂಟೆಗಳ ಕ್ಷಣಗಣನೆ ಪ್ರಾರಂಭವಾಗಿದೆ.

ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್‍ನಿಂದ ಮೇ.18 ರಂದು ಬೆಳಿಗ್ಗೆ 5.59 ಕ್ಕೆ ರಾಕೆಟ್ ಮೂಲಕ ಉಪಗ್ರಹ ಉಡಾವಣೆ ನಡೆಯಲಿದೆ. ಇದು 101 ನೇ ಕಾರ್ಯಾಚರಣೆಯಾಗಿದೆ ಎಂದು ಬೆಂಗಳೂರಿನಲ್ಲಿರುವ ಇಸ್ರೋ ಪ್ರಧಾನ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವುದೇ ಹವಾಮಾನ ಪರಿಸ್ಥಿತಿಯಲೂ ಕೂಡ ಭೂಮಿಯ ಮೇಲಿರುವ ವಸ್ತುಗಳನ್ನು ನಿಕರವಾಗಿ ಹೆಚ್ಚಿನ ರೆಸಲ್ಯೂಶನ್ ಚಿತ್ರಗಳನ್ನು ಸೆರೆಹಿಡಿಯುವ ಸಾಮಥ್ರ್ಯವನ್ನು ಹೊಂದಿರುವ ಭೂ ವೀಕ್ಷಣಾ ಉಪಗ್ರಹವನ್ನು (ಇಓಎಸ್-09) ನಭಕ್ಕೆ ಹಾರಿಸಲಾಗುತ್ತಿದೆ.

ಕೃಷಿ, ಅರಣ್ಯ ಮೇಲ್ವಿಚಾರಣೆ, ವಿಪತ್ತು ನಿರ್ವಹಣೆ, ನಗರ ಯೋಜನೆ ಮತ್ತು ರಾಷ್ಟ್ರೀಯ ಭದ್ರತೆಯಂತಹ ಅನ್ವಯಿಕೆಗಳಿಗೆ ಉಪಗ್ರಹದ ಸುತ್ತ-ಇಮೇಜಿಂಗ್ ಅತ್ಯಗತ್ಯ.

ಸುಮಾರು 1,696.24 ಕೆಜಿ ತೂಕವಿರುವ ಉಪಗ್ರಹವು ಭೂ ವೀಕ್ಷಣಾ ಉಪಗ್ರಹಗಳ ಸಮೂಹವನ್ನು ಸೇರಲಿದೆ, ಇದು ದೇಶದ ವಿಶಾಲ ಪ್ರದೇಶದಾದ್ಯಂತ ವಿಸ್ತೃತ ನೈಜ-ಸಮಯದ ವ್ಯಾಪ್ತಿಯ ಅಗತ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಇಓಎದ್-09 ಈಗಾಗಲೆ ಕಾರ್ಯನಿರ್ವಹಿಸಿಸುತ್ತಿರುವ (ಆರ್‍ಐಎಸ್‍ಐಟಿ -1ಬಿ )ಉಪಗ್ರಹದ ಅನುಸರಣೆಯಾಗಿದ್ದು, ಇದು ಇದೇ ರೀತಿಯ ಸಂರಚನೆಯನ್ನು ಹೊಂದಿದೆ. ಸರಣಿ ಉಪಗ್ರಹಗಳಿಂದ ಡೇಟಾವನ್ನು ಪೂರಕಗೊಳಿಸುತ್ತದೆ.

ಉಡಾವಣೆಯಾಗಿ 17 ನಿಮಿಷಗಳ ಪ್ರಯಾಣದ ನಂತರ, ರಾಕೆಟ್ ಉಪಗ್ರಹವನ್ನು ಸೂರ್ಯ ಸಿಂಕ್ರೊನಸ್ ಪೋಲಾರ್ ಆರ್ಬಿಟ್‍ಗೆ ಇರಿಸುವ ನಿರೀಕ್ಷೆಯಿದೆ. ಉಪಗ್ರಹವು ಅಪೇಕ್ಷಿತ ಕಕ್ಷೆಯಲ್ಲಿ ಬೇರ್ಪಟ್ಟ ನಂತರ, ವಿಜ್ಞಾನಿಗಳು ಕಕ್ಷೆಯ ಎತ್ತರವನ್ನು ಕಡಿಮೆ ಮಾಡಲಾಗುತ್ತದೆ .ಪ್ರಸ್ತುತ ಉಪಗ್ರಹ ಜೀವಿತಾವಧಿ 5 ವರ್ಷಗಳು ಎಂದು ಇಸ್ರೋ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

11 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

11 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

11 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago