ದೇಶ- ವಿದೇಶ

ಅಂಬೇಡ್ಕರ್‌ ಅವರನ್ನು ಪದೇ ಪದೇ ಅವಮಾನಿಸಿದ್ದೇ ಕಾಂಗ್ರೆಸ್:‌ ಪ್ರಧಾನಿ ಮೋದಿ ವಾಗ್ದಾಳಿ

ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಆಶಯಕ್ಕೆ ವಿರುದ್ಧವಾಗಿ ವಕ್ಫ್‌ ಕಾನೂನು ರೂಪಿಸಿದ್ದು ಕಾಂಗ್ರೆಸ್‌ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸಂವಿಧಾನದ ಮೂಲ ಆಶಯವನ್ನು ಹಾಳು ಮಾಡುವಂತೆ ವಕ್ಫ್‌ ಕಾನೂನನ್ನು ಕಾಂಗ್ರೆಸ್‌ ರೂಪಿಸಿತ್ತು.

ಕಳೆದ 2013ರಲ್ಲಿ ಕಾಂಗ್ರೆಸ್‌ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತಂದಿತ್ತು. ತನ್ನ ಮತ ಬ್ಯಾಂಕ್‌ ಅನ್ನು ತೃಪ್ತಿಪಡಿಸಿಕೊಳ್ಳಲು ತರಾತುರಿಯಲ್ಲಿ ತಿದ್ದುಪಡಿ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು.

ಇನ್ನು ಕಾಂಗ್ರೆಸ್ ಕೆಲ ಮೂಲಭೂತವಾದಿಗಳನ್ನು ಮಾತ್ರ ಖುಷಿಪಡಿಸಿದೆ. ಉಳಿದ ಸಮಾಜವು ಶೋಚನೀಯ, ಅವಿದ್ಯಾವಂತ ಮತ್ತು ಬಡವರಾಗಿಯೇ ಉಳಿದಿದೆ. ಕಾಂಗ್ರೆಸ್ಸಿನ ಈ ದುಷ್ಟ ನೀತಿಗೆ ದೊಡ್ಡ ಪುರಾವೆ ವಕ್ಫ್‌ ಕಾಯ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಬಾಬಾ ಸಾಹೇಸ್‌ ಅಂಬೇಡ್ಕರ್‌ ಅವರನ್ನು ಪದೇ ಪದೇ ಅವಮಾನಿಸಿದ್ದು ಕಾಂಗ್ರೆಸ್‌. ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಮಾಡಿದ್ದ ಮೋಸವನ್ನು ನಾವು ಮರೆಯಲು ಕೂಡ ಆಗಲ್ಲ. ಅಂಬೇಡ್ಕರ್‌ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದರು ಎಂದು ಕಾಂಗ್ರೆಸ್‌ ಪಕ್ಷದ ವಿರುದ್ಧ ಹರಿಹಾಯ್ದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

8 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

8 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

8 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

9 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

10 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

10 hours ago