narrendra modi
ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ವಕ್ಫ್ ಕಾನೂನು ರೂಪಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಹರಿಯಾಣದ ಹಿಸಾರ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸಂವಿಧಾನದ ಮೂಲ ಆಶಯವನ್ನು ಹಾಳು ಮಾಡುವಂತೆ ವಕ್ಫ್ ಕಾನೂನನ್ನು ಕಾಂಗ್ರೆಸ್ ರೂಪಿಸಿತ್ತು.
ಕಳೆದ 2013ರಲ್ಲಿ ಕಾಂಗ್ರೆಸ್ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ತನ್ನ ಮತ ಬ್ಯಾಂಕ್ ಅನ್ನು ತೃಪ್ತಿಪಡಿಸಿಕೊಳ್ಳಲು ತರಾತುರಿಯಲ್ಲಿ ತಿದ್ದುಪಡಿ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು.
ಇನ್ನು ಕಾಂಗ್ರೆಸ್ ಕೆಲ ಮೂಲಭೂತವಾದಿಗಳನ್ನು ಮಾತ್ರ ಖುಷಿಪಡಿಸಿದೆ. ಉಳಿದ ಸಮಾಜವು ಶೋಚನೀಯ, ಅವಿದ್ಯಾವಂತ ಮತ್ತು ಬಡವರಾಗಿಯೇ ಉಳಿದಿದೆ. ಕಾಂಗ್ರೆಸ್ಸಿನ ಈ ದುಷ್ಟ ನೀತಿಗೆ ದೊಡ್ಡ ಪುರಾವೆ ವಕ್ಫ್ ಕಾಯ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಬಾಬಾ ಸಾಹೇಸ್ ಅಂಬೇಡ್ಕರ್ ಅವರನ್ನು ಪದೇ ಪದೇ ಅವಮಾನಿಸಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮಾಡಿದ್ದ ಮೋಸವನ್ನು ನಾವು ಮರೆಯಲು ಕೂಡ ಆಗಲ್ಲ. ಅಂಬೇಡ್ಕರ್ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದರು ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…