ದೇಶ- ವಿದೇಶ

ಅಂಬೇಡ್ಕರ್‌ ಅವರನ್ನು ಪದೇ ಪದೇ ಅವಮಾನಿಸಿದ್ದೇ ಕಾಂಗ್ರೆಸ್:‌ ಪ್ರಧಾನಿ ಮೋದಿ ವಾಗ್ದಾಳಿ

ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಆಶಯಕ್ಕೆ ವಿರುದ್ಧವಾಗಿ ವಕ್ಫ್‌ ಕಾನೂನು ರೂಪಿಸಿದ್ದು ಕಾಂಗ್ರೆಸ್‌ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸಂವಿಧಾನದ ಮೂಲ ಆಶಯವನ್ನು ಹಾಳು ಮಾಡುವಂತೆ ವಕ್ಫ್‌ ಕಾನೂನನ್ನು ಕಾಂಗ್ರೆಸ್‌ ರೂಪಿಸಿತ್ತು.

ಕಳೆದ 2013ರಲ್ಲಿ ಕಾಂಗ್ರೆಸ್‌ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತಂದಿತ್ತು. ತನ್ನ ಮತ ಬ್ಯಾಂಕ್‌ ಅನ್ನು ತೃಪ್ತಿಪಡಿಸಿಕೊಳ್ಳಲು ತರಾತುರಿಯಲ್ಲಿ ತಿದ್ದುಪಡಿ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು.

ಇನ್ನು ಕಾಂಗ್ರೆಸ್ ಕೆಲ ಮೂಲಭೂತವಾದಿಗಳನ್ನು ಮಾತ್ರ ಖುಷಿಪಡಿಸಿದೆ. ಉಳಿದ ಸಮಾಜವು ಶೋಚನೀಯ, ಅವಿದ್ಯಾವಂತ ಮತ್ತು ಬಡವರಾಗಿಯೇ ಉಳಿದಿದೆ. ಕಾಂಗ್ರೆಸ್ಸಿನ ಈ ದುಷ್ಟ ನೀತಿಗೆ ದೊಡ್ಡ ಪುರಾವೆ ವಕ್ಫ್‌ ಕಾಯ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಬಾಬಾ ಸಾಹೇಸ್‌ ಅಂಬೇಡ್ಕರ್‌ ಅವರನ್ನು ಪದೇ ಪದೇ ಅವಮಾನಿಸಿದ್ದು ಕಾಂಗ್ರೆಸ್‌. ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಮಾಡಿದ್ದ ಮೋಸವನ್ನು ನಾವು ಮರೆಯಲು ಕೂಡ ಆಗಲ್ಲ. ಅಂಬೇಡ್ಕರ್‌ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದರು ಎಂದು ಕಾಂಗ್ರೆಸ್‌ ಪಕ್ಷದ ವಿರುದ್ಧ ಹರಿಹಾಯ್ದರು.

ಆಂದೋಲನ ಡೆಸ್ಕ್

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

9 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

18 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago