narrendra modi
ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ವಕ್ಫ್ ಕಾನೂನು ರೂಪಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಹರಿಯಾಣದ ಹಿಸಾರ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸಂವಿಧಾನದ ಮೂಲ ಆಶಯವನ್ನು ಹಾಳು ಮಾಡುವಂತೆ ವಕ್ಫ್ ಕಾನೂನನ್ನು ಕಾಂಗ್ರೆಸ್ ರೂಪಿಸಿತ್ತು.
ಕಳೆದ 2013ರಲ್ಲಿ ಕಾಂಗ್ರೆಸ್ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ತನ್ನ ಮತ ಬ್ಯಾಂಕ್ ಅನ್ನು ತೃಪ್ತಿಪಡಿಸಿಕೊಳ್ಳಲು ತರಾತುರಿಯಲ್ಲಿ ತಿದ್ದುಪಡಿ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು.
ಇನ್ನು ಕಾಂಗ್ರೆಸ್ ಕೆಲ ಮೂಲಭೂತವಾದಿಗಳನ್ನು ಮಾತ್ರ ಖುಷಿಪಡಿಸಿದೆ. ಉಳಿದ ಸಮಾಜವು ಶೋಚನೀಯ, ಅವಿದ್ಯಾವಂತ ಮತ್ತು ಬಡವರಾಗಿಯೇ ಉಳಿದಿದೆ. ಕಾಂಗ್ರೆಸ್ಸಿನ ಈ ದುಷ್ಟ ನೀತಿಗೆ ದೊಡ್ಡ ಪುರಾವೆ ವಕ್ಫ್ ಕಾಯ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಬಾಬಾ ಸಾಹೇಸ್ ಅಂಬೇಡ್ಕರ್ ಅವರನ್ನು ಪದೇ ಪದೇ ಅವಮಾನಿಸಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮಾಡಿದ್ದ ಮೋಸವನ್ನು ನಾವು ಮರೆಯಲು ಕೂಡ ಆಗಲ್ಲ. ಅಂಬೇಡ್ಕರ್ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದರು ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…