ದೇಶ- ವಿದೇಶ

ಸ್ವಾತಂತ್ರ್ಯದ 75ನೇ ವರ್ಷಾಚರಣೆ ಬಡವರಿಗೆ ಹೊರೆಯಾದರೆ ಅದು ದುರದೃಷ್ಟಕರ : ವರುಣ್‌ ಗಾಂಧಿ

ರೇಷನ್‌ ಅಂಗಡಿಯಲ್ಲಿ ದಿನಸಿ ಸಾಮಗ್ರಿ ಕೊಳ್ಳಲು ಹೋದ ಜನರಿಗೆ ರಾಷ್ಟ್ರಧ್ವಜ ಕೊಂಡುಕೊಳ್ಳಲು ಒತ್ತಾಯಿಸಿದ ಸಿಬ್ಬಂದಿಯ ವಿಡಿಯೋವೊಂದು ವೈರಲ್‌ ಆಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ವರುಣ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. 20 ರೂ.ಗೆ ತಿರಂಗ ಧ್ವಜವನ್ನು ಕೊಂಡುಕೊಳ್ಳಲು ಹಲವರಿಗೆ ಆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ವಿಡಿಯೋದಲ್ಲಿ ನೋಡಬಹುದು.

ಹಲವು ವಿಚಾರಗಳಲ್ಲಿ ಕೇಸರಿ ಪಕ್ಷದ ವಿರುದ್ಧವೇ ಹರಿಹಾಯುವ ಫಿಲಿಬಿಟ್‌ನ ಬಿಜೆಪಿ ಸಂಸದ ವರುಣ್‌ ಗಾಂಧಿ, ಟ್ವಿಟ್ಟರ್‌ನಲ್ಲಿ ಈ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ,  ಸ್ವಾತಂತ್ರ್ಯದ 75ನೇ ವರ್ಷಾಚರಣೆ ಬಡವರಿಗೆ ಹೊರೆಯಾದರೆ ಅದು ದುರದೃಷ್ಟಕರ ಎಂಬ ಕ್ಯಾಪ್ಷನ್‌ ಅನ್ನು ಸಹ ಹಂಚಿಕೊಂಡಿದ್ದಾರೆ. ರೇಷನ್‌ ಕಾರ್ಡ್‌ ಹೊಂದಿದವರಿಗೆ ರಾಷ್ಟ್ರ ಧ್ವಜ ಕೊಂಡುಕೊಳ್ಳಲು ಒತ್ತಾಯಿಸಲಾಗುತ್ತಿದೆ. ಇಲ್ಲದಿದ್ದರೆ ಅವರಿಗೆ ನೀಡಬೇಕಾದ ಧಾನ್ಯಗಳನ್ನು ಕೊಡಲು ನಿರಾಕರಿಸಲಾಗುತ್ತಿದೆ. ಬಡವರ ತುತ್ತು ಅನ್ನ ಕಸಿದುಕೊಂಡು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಯೂರಿರುವ ‘ತಿರಂಗ’ದ ಬೆಲೆ ಕೀಳುವುದು ನಾಚಿಕೆಗೇಡಿನ ಸಂಗತಿ ಎಂದೂ ವರುಣ್‌ ಗಾಂಧಿ ಕಿಡಿ ಕಾರಿದ್ದಾರೆ.

ಹರ್ಯಾಣದ ಕರ್ನಾಲ್‌ನಲ್ಲಿ ಈ ವಿಡಿಯೋವನ್ನು ಸುದ್ದಿ ಪೋರ್ಟಲ್‌ವೊಂದು ರೆಕಾರ್ಡ್‌ ಮಾಡಿದ್ದು, ಈ ವಿಡಿಯೋದಲ್ಲಿ ರೂ. 20 ಕೊಟ್ಟು ರಾಷ್ಟ್ರಧ್ವಜ ಕೊಂಡುಕೊಳ್ಳಲು ಒತ್ತಾಯಿಸಲಾಗುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ನಡೆಸುವ ರೇಷನ್‌ ಡಿಪೋವೊಂದರಲ್ಲಿ ಈ ರೀತಿ ಒತ್ತಾಯಿಸಲಾಗುತ್ತಿದೆ ಎಂದೂ ಹೇಳಲಾಗಿದೆ.

ರೇಷನ್‌ ಡಿಪೋದ ಸಿಬ್ಬಂದಿ ಎನ್ನಲಾದ ವ್ಯಕ್ತಿ, ರೇಷನ್‌ ಕೊಳ್ಳುವ ಪ್ರತಿ ವ್ಯಕ್ತಿ ಸಹ ರೂ. 20 ಕೊಟ್ಟು ತಿರಂಗ ಧ್ವಜ ಕೊಂಡುಕೊಳ್ಳಬೇಕೆಂದು ಹಾಗೂ ಅದನ್ನು ತಮ್ಮ ಮನೆಗಳಲ್ಲಿ ಹಾಕಿಕೊಳ್ಳಬೇಕೆಂದು ನಮಗೆ ಆದೇಶ ಬಂದಿದೆ ಎಂದು ಆ ವಿಡಿಯೋದಲ್ಲಿ ಹೇಳಿರುವುದನ್ನು ಕೇಳಬಹುದು. ಅಲ್ದೆ, ಧ್ವಜ ಕೊಂಡುಕೊಳ್ಳದಿದ್ದರೆ ಅಂತಹವರಿಗೆ ರೇಷನ್‌ ಕೊಡಬೇಡಿ ಎಂದು ನಮಗೆ ಹೇಳಲಾಗಿದೆ. ನಮಗೆ ಬಂದಿರುವ ಆದೇಶವನ್ನು ನಾವು ಪಾಲಿಸಬೇಕಿದೆ ಎಂದೂ ಆ ವ್ಯಕ್ತಿ ಹೇಳಿದ್ದಾರೆ.

andolana

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

16 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

28 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

55 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago