ದೇಶ- ವಿದೇಶ

ಸ್ವಾತಂತ್ರ್ಯದ 75ನೇ ವರ್ಷಾಚರಣೆ ಬಡವರಿಗೆ ಹೊರೆಯಾದರೆ ಅದು ದುರದೃಷ್ಟಕರ : ವರುಣ್‌ ಗಾಂಧಿ

ರೇಷನ್‌ ಅಂಗಡಿಯಲ್ಲಿ ದಿನಸಿ ಸಾಮಗ್ರಿ ಕೊಳ್ಳಲು ಹೋದ ಜನರಿಗೆ ರಾಷ್ಟ್ರಧ್ವಜ ಕೊಂಡುಕೊಳ್ಳಲು ಒತ್ತಾಯಿಸಿದ ಸಿಬ್ಬಂದಿಯ ವಿಡಿಯೋವೊಂದು ವೈರಲ್‌ ಆಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ವರುಣ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. 20 ರೂ.ಗೆ ತಿರಂಗ ಧ್ವಜವನ್ನು ಕೊಂಡುಕೊಳ್ಳಲು ಹಲವರಿಗೆ ಆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ವಿಡಿಯೋದಲ್ಲಿ ನೋಡಬಹುದು.

ಹಲವು ವಿಚಾರಗಳಲ್ಲಿ ಕೇಸರಿ ಪಕ್ಷದ ವಿರುದ್ಧವೇ ಹರಿಹಾಯುವ ಫಿಲಿಬಿಟ್‌ನ ಬಿಜೆಪಿ ಸಂಸದ ವರುಣ್‌ ಗಾಂಧಿ, ಟ್ವಿಟ್ಟರ್‌ನಲ್ಲಿ ಈ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ,  ಸ್ವಾತಂತ್ರ್ಯದ 75ನೇ ವರ್ಷಾಚರಣೆ ಬಡವರಿಗೆ ಹೊರೆಯಾದರೆ ಅದು ದುರದೃಷ್ಟಕರ ಎಂಬ ಕ್ಯಾಪ್ಷನ್‌ ಅನ್ನು ಸಹ ಹಂಚಿಕೊಂಡಿದ್ದಾರೆ. ರೇಷನ್‌ ಕಾರ್ಡ್‌ ಹೊಂದಿದವರಿಗೆ ರಾಷ್ಟ್ರ ಧ್ವಜ ಕೊಂಡುಕೊಳ್ಳಲು ಒತ್ತಾಯಿಸಲಾಗುತ್ತಿದೆ. ಇಲ್ಲದಿದ್ದರೆ ಅವರಿಗೆ ನೀಡಬೇಕಾದ ಧಾನ್ಯಗಳನ್ನು ಕೊಡಲು ನಿರಾಕರಿಸಲಾಗುತ್ತಿದೆ. ಬಡವರ ತುತ್ತು ಅನ್ನ ಕಸಿದುಕೊಂಡು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಯೂರಿರುವ ‘ತಿರಂಗ’ದ ಬೆಲೆ ಕೀಳುವುದು ನಾಚಿಕೆಗೇಡಿನ ಸಂಗತಿ ಎಂದೂ ವರುಣ್‌ ಗಾಂಧಿ ಕಿಡಿ ಕಾರಿದ್ದಾರೆ.

ಹರ್ಯಾಣದ ಕರ್ನಾಲ್‌ನಲ್ಲಿ ಈ ವಿಡಿಯೋವನ್ನು ಸುದ್ದಿ ಪೋರ್ಟಲ್‌ವೊಂದು ರೆಕಾರ್ಡ್‌ ಮಾಡಿದ್ದು, ಈ ವಿಡಿಯೋದಲ್ಲಿ ರೂ. 20 ಕೊಟ್ಟು ರಾಷ್ಟ್ರಧ್ವಜ ಕೊಂಡುಕೊಳ್ಳಲು ಒತ್ತಾಯಿಸಲಾಗುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ನಡೆಸುವ ರೇಷನ್‌ ಡಿಪೋವೊಂದರಲ್ಲಿ ಈ ರೀತಿ ಒತ್ತಾಯಿಸಲಾಗುತ್ತಿದೆ ಎಂದೂ ಹೇಳಲಾಗಿದೆ.

ರೇಷನ್‌ ಡಿಪೋದ ಸಿಬ್ಬಂದಿ ಎನ್ನಲಾದ ವ್ಯಕ್ತಿ, ರೇಷನ್‌ ಕೊಳ್ಳುವ ಪ್ರತಿ ವ್ಯಕ್ತಿ ಸಹ ರೂ. 20 ಕೊಟ್ಟು ತಿರಂಗ ಧ್ವಜ ಕೊಂಡುಕೊಳ್ಳಬೇಕೆಂದು ಹಾಗೂ ಅದನ್ನು ತಮ್ಮ ಮನೆಗಳಲ್ಲಿ ಹಾಕಿಕೊಳ್ಳಬೇಕೆಂದು ನಮಗೆ ಆದೇಶ ಬಂದಿದೆ ಎಂದು ಆ ವಿಡಿಯೋದಲ್ಲಿ ಹೇಳಿರುವುದನ್ನು ಕೇಳಬಹುದು. ಅಲ್ದೆ, ಧ್ವಜ ಕೊಂಡುಕೊಳ್ಳದಿದ್ದರೆ ಅಂತಹವರಿಗೆ ರೇಷನ್‌ ಕೊಡಬೇಡಿ ಎಂದು ನಮಗೆ ಹೇಳಲಾಗಿದೆ. ನಮಗೆ ಬಂದಿರುವ ಆದೇಶವನ್ನು ನಾವು ಪಾಲಿಸಬೇಕಿದೆ ಎಂದೂ ಆ ವ್ಯಕ್ತಿ ಹೇಳಿದ್ದಾರೆ.

andolana

Recent Posts

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

2 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

5 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

5 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

5 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

18 hours ago