ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಏಕನಾಥ್ ಶಿಂಧೆ ತಿಳಿಸಿದರು.
ಈ ಬಗ್ಗೆ ಮಾತನಾಡಿದ ಏಕನಾಥ್ ಶಿಂಧೆ ಅವರು, ಅಜಿತ್ ಪವಾರ್ ಅವರು ವಿವಿಧ ಸಚಿವ ಸಂಪುಟಗಳಲ್ಲಿ ನಮ್ಮ ಸಹೋದ್ಯೋಗಿಯಾಗಿ ಸೇವೆ ಸಲ್ಲಿಸಿದ್ದರು. ನಾನು 2022ರಿಂದ 2024ರವರೆಗೆ ಸಿಎಂ ಆಗಿದ್ದಾಗ ಅವರು ಡಿಸಿಎಂ ಆಗಿದ್ದರು. ಈ ನಷ್ಟ ಪವಾರ್ ಕುಟುಂಬಕ್ಕೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ. ನಾನು ನನ್ನ ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.





