mallikarjun kharge
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಹಿಂದೆ ಏನೋ ಅಡಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಗದೀಪ್ ಧನಕರ್ ರಾಜೀನಾಮೆ ಯಾಕೆ ಕೊಟ್ಟರು. ಈ ಬಗ್ಗೆ ಕೇಂದ್ರ ಸರ್ಕಾರ ಉತ್ತರಿಸಬೇಕು. ಧನಕರ್ ಅವರ ಆರೋಗ್ಯ ಚೆನ್ನಾಗಿಯೇ ಇದೆ. ಹೀಗಿರುವಾಗ ರಾಜೀನಾಮೆ ನೀಡಿದ್ದು ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ.
ಧನಕರ್ ಅವರು ಆರ್ಎಸ್ಎಸ್ಗೆ ತುಂಬಾ ನಿಷ್ಠೆಯಿಂದ ಇದ್ದರು. ಹೀಗಿರುವಾಗ ಅವರು ಯಾಕೆ ರಾಜೀನಾಮೆ ಕೊಟ್ಟರು. ಇದರ ಹಿಂದೆ ಯಾರಿದ್ದಾರೆ ಎಂದು ದೇಶಕ್ಕೆ ಕೇಂದ್ರ ಸರ್ಕಾರ ತಿಳಿಸಬೇಕು ಎಂದು ಆಗ್ರಹಿಸಿದರು.
ಇನ್ನು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಒಳಗೊಂಡಂತೆ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತಕ ಒಕ್ಕೂಟವು ಬಹುಮತವನ್ನು ಹೊಂದಿರುವುದರಿಂದ, ಧನಕರ್ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.
ಭಾರತೀಯ ಸಂವಿಧಾನದ ಪ್ರಕಾರ, 60 ದಿನಗಳ ಒಳಗೆ ಹೊಸ ಉಪಾಧ್ಯಕ್ಷರನ್ನು ಆಯ್ಕೆ ಮಾಡುವುದು ಕಡ್ಡಾಯವಾಗಿದೆ. ಅಲ್ಲಿಯವರೆಗೆ, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರು ಹಂಗಾಮಿ ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಜಗದೀಪ್ ಧನಕರ್ ಅವರ ರಾಜೀನಾಮೆ ರಾಜಕೀಯ ಚರ್ಚೆಗಳಿಗೆ ಉತ್ತೇಜನ ನೀಡಿದ್ದು ಮಾತ್ರವಲ್ಲದೆ ಸಂಸತ್ತಿನ ಅಧಿವೇಶನದ ನಡವಳಿಕೆಯ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…