ದೇಶ- ವಿದೇಶ

ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಮಧ್ಯಾಹ್ನ ನೂತನ ಉಪ ರಾಷ್ಟ್ರಪತಿಗೆ ಪ್ರಮಾಣನ ವಚನ ಬೋಧಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೆಂದ್ರ ಗೃಹ ಸಚಿವ ಅಮಿತ್‌ ಶಾ, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಹಲವರು ಗಣ್ಯರು ಭಾಗಿಯಾಗಿದ್ದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್, ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ,ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್, ಸೇರಿ ಹಲವು ಗಣ್ಯರು ಸಹ ಭಾಗಿಯಾಗಿದ್ದರು.

ಇನ್ನು, ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ಗುರುವಾರ ಜಗದೀಪ್‌ ಧನಕರ್‌, ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಸಿದರು.
ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇಂದು ಮುಕ್ತಾಯವಾಗಿದ್ದು,  ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಪ್‌ ಧನಕರ್‌ ಇನ್ಮುಂದೆ ರಾಜ್ಯಸಭೆಯ ಸಭಾಪತಿಯೂ ಆಗಿರಲಿದ್ದಾರೆ.

andolana

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

18 mins ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

25 mins ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

11 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

15 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

16 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

17 hours ago