ದೇಶ- ವಿದೇಶ

ಪೆನ್‌ಡ್ರೈವ್‌ ಪ್ರಕರಣ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ವಿದೇಶಾಂಗ ಸಚಿವ

ನವದೆಹಲಿ: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ್‌ ಸಚಿವಾಲಯ ರೇವಣ್ಣ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿದೆ. ಇದರೊಂದಿಗೆ ಈ ಪ್ರಕರಣದ ಬಗ್ಗೆ ಮೊದಲ ಬಾರಿಗೆ ವಿದೇಶಾಂಗ ಸಚಿವ ಜೈ ಶಂಕರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಸರ್ಕಾರ ನೀಡಿರುವ ಅರ್ಜಿಯನ್ನು ಮೇ. 21ರಂದು ಸ್ವೀಕರಿಸಲಾಗಿದ್ದು, ಪಾಸ್‌ಪೋರ್ಟ್‌ ರದ್ದುಗೊಳಿಸುವ ಬಗ್ಗೆ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಖಚಿತ ಪಡಿಸಿದೆ.

ಇಂದು ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡಿರುವ ವಿದೇಶಾಂಗ ಸಚಿವ ಜೈ ಶಂಕರ್‌, ಮೇ. 21ರಂದೇ ಕರ್ನಾಟಕದ ಮನವಿಯನ್ನು ವಿದೇಶಾಂಗ ಸಚಿವಾಲಯ ಸ್ವೀಕರಿಸಿದೆ. ಮತ್ತು ಮೇ.23 ರಿಂದಲೇ ಪಾಸ್‌ಪೋರ್ಟ್‌ ವಶಪಡಿಸಿಕೊಳ್ಳಲು ಮುಂದಾಗಿದೆ. ಆದರೆ ಪಾಸ್‌ಪೋರ್ಟ್‌ ನಿಯಮಾನುಸಾರವೇ ಆ ಕೆಲಸವನ್ನು ಮಾಡಬೇಕಿದೆ. ರೇವಣ್ಣ ಅವರ ಪಾಸ್‌ಪೋರ್ಟ್‌ ವಶಪಡಿಸಿಕೊಳ್ಳಲು ನ್ಯಾಯಾಲಯ ಹಾಗೂ ಪೊಲೀಸರ ಸಹಕಾರ ಅಗತ್ಯವಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರದ ಮನವಿಗೆ ಸ್ಪಂದನೆ ನೀಡಿರುವ ಕೇಂದ್ರ ವಿದೇಶಾಂಗ ಸಚಿವಾಲಯ ಪ್ರಜ್ವಲ್‌ ರೇವಣ್ಣ ವಿರುದ್ಧ ಶೋಕಾಸ್‌ ನೋಟಿಸ್‌ ನೀಡಿದ್ದಾರೆ. ಈ ಸಂಬಂಧ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ನ್ನು ಯಾವ ಕಾರಣಕ್ಕಾಗಿ ರದ್ದು ಮಾಡಬಾರದು ಎಂಬ ಬಗ್ಗೆ 10 ದಿನಗಳ ಒಳಗಾಗಿ ವಿದೇಶಾಂಗ ಸಚಿವಾಲಯಕ್ಕೆ ಪ್ರಜ್ವಲ್‌ ಮಾಹಿತಿ ನೀಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago