ದೇಶ- ವಿದೇಶ

ಪೆನ್‌ಡ್ರೈವ್‌ ಪ್ರಕರಣ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ವಿದೇಶಾಂಗ ಸಚಿವ

ನವದೆಹಲಿ: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ್‌ ಸಚಿವಾಲಯ ರೇವಣ್ಣ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿದೆ. ಇದರೊಂದಿಗೆ ಈ ಪ್ರಕರಣದ ಬಗ್ಗೆ ಮೊದಲ ಬಾರಿಗೆ ವಿದೇಶಾಂಗ ಸಚಿವ ಜೈ ಶಂಕರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಸರ್ಕಾರ ನೀಡಿರುವ ಅರ್ಜಿಯನ್ನು ಮೇ. 21ರಂದು ಸ್ವೀಕರಿಸಲಾಗಿದ್ದು, ಪಾಸ್‌ಪೋರ್ಟ್‌ ರದ್ದುಗೊಳಿಸುವ ಬಗ್ಗೆ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಖಚಿತ ಪಡಿಸಿದೆ.

ಇಂದು ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡಿರುವ ವಿದೇಶಾಂಗ ಸಚಿವ ಜೈ ಶಂಕರ್‌, ಮೇ. 21ರಂದೇ ಕರ್ನಾಟಕದ ಮನವಿಯನ್ನು ವಿದೇಶಾಂಗ ಸಚಿವಾಲಯ ಸ್ವೀಕರಿಸಿದೆ. ಮತ್ತು ಮೇ.23 ರಿಂದಲೇ ಪಾಸ್‌ಪೋರ್ಟ್‌ ವಶಪಡಿಸಿಕೊಳ್ಳಲು ಮುಂದಾಗಿದೆ. ಆದರೆ ಪಾಸ್‌ಪೋರ್ಟ್‌ ನಿಯಮಾನುಸಾರವೇ ಆ ಕೆಲಸವನ್ನು ಮಾಡಬೇಕಿದೆ. ರೇವಣ್ಣ ಅವರ ಪಾಸ್‌ಪೋರ್ಟ್‌ ವಶಪಡಿಸಿಕೊಳ್ಳಲು ನ್ಯಾಯಾಲಯ ಹಾಗೂ ಪೊಲೀಸರ ಸಹಕಾರ ಅಗತ್ಯವಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರದ ಮನವಿಗೆ ಸ್ಪಂದನೆ ನೀಡಿರುವ ಕೇಂದ್ರ ವಿದೇಶಾಂಗ ಸಚಿವಾಲಯ ಪ್ರಜ್ವಲ್‌ ರೇವಣ್ಣ ವಿರುದ್ಧ ಶೋಕಾಸ್‌ ನೋಟಿಸ್‌ ನೀಡಿದ್ದಾರೆ. ಈ ಸಂಬಂಧ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ನ್ನು ಯಾವ ಕಾರಣಕ್ಕಾಗಿ ರದ್ದು ಮಾಡಬಾರದು ಎಂಬ ಬಗ್ಗೆ 10 ದಿನಗಳ ಒಳಗಾಗಿ ವಿದೇಶಾಂಗ ಸಚಿವಾಲಯಕ್ಕೆ ಪ್ರಜ್ವಲ್‌ ಮಾಹಿತಿ ನೀಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

8 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago