pm naredra Modi
ಬಿಹಾರ : ಒಬ್ಬ ಜೈಲು ಅಧಿಕಾರಿ ಜೈಲಿಗೆ ಹೋಗಿ 50 ಗಂಟೆ ಕಳೆದರೆ ಆತನನ್ನು ಸೇವೆಯಿಂದ ಅಮಾನತುಪಡಿಸಲಾಗುತ್ತದೆ. ಇದೇ ನಿಯಮ ಪ್ರಧಾನಮಂತ್ರಿ, ಮುಖ್ಯಮಂತ್ರಿ ಹಾಗೂ ಸಚಿವರಿಗೂ ಅನ್ವಯವಾಗಬೇಕಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ಉದ್ದೇಶಿತ ಕ್ರಿಮಿನಲ್ ಮೊಕದ್ದಮೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಬಿಹಾರದ ಗಯಾದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಸರ್ಕಾರಿ ಅಧಿಕಾರಿಯೊಬ್ಬ ಯಾವುದೋ ಪ್ರಕರಣದಲ್ಲಿ ಜೈಲು ಸೇರಿ 50 ಗಂಟೆ ಕಳೆದರೆ ಆತನನ್ನು ಸೇವೆಯಿಂದ ವಜಾ ಮಾಡುತ್ತೇವೆ. ಅದೇ ರೀತಿ ಉನ್ನತ ಸ್ಥಾನದಲ್ಲಿರುವ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರಿಗೂ ಈ ನಿಯಮ ಏಕೆ ಅನ್ವಯಿಸಬಾರದು? ಎಂದು ಪ್ರಶ್ನಿಸಿದರು.
ಜೈಲಿನ ಅಧೀಕ್ಷಕರೇ ಇರಲಿ, ಚಾಲಕ, ಕ್ಲರ್ಕ್, ಗುಮಾಸ್ತ ಸೇರಿದಂತೆ ಸರ್ಕಾರಿ ಅಧಿಕಾರಿಗಳು 50 ಗಂಟೆಯೊಳಗೆ ಜೈಲಿನಲ್ಲಿದ್ದರೆ ಸಹಜವಾಗಿ ಅಮಾನತುಗೊಳ್ಳುತ್ತಾರೆ. ಆದರೆ ಕೆಲವರು ಜೈಲಿನಲ್ಲಿ ಕುಳಿತುಕೊಂಡೇ ಅಧಿಕಾರ ಅನುಭವಿಸಬೇಕು ಎಂಬ ಕನಸು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಪ್ರತಿಪಕ್ಷದ ವಿರುದ್ಧ ಕಿಡಿಕಾರಿದರು.
ನಮ್ಮ ಎನ್ಡಿಎ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಸಮರವನ್ನೇ ಸಾರಿದೆ. ಹೀಗಾಗಿಯೇ ನಾವು ಕ್ರಿಮಿನಲ್ ಮೊಕದ್ದಮೆಯನ್ನು ಮಂಡಿಸಿದ್ದೇವೆ. ಪ್ರಧಾನಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರು 30 ದಿನ ಜೈಲಿನಲ್ಲಿದ್ದರೆ ಅವರನ್ನು ತೆಗೆದು ಹಾಕುವ ಕಾನೂನು ಇದರಲ್ಲಿದೆ ಎಂದು ಹೇಳಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…