pm naredra Modi
ಬಿಹಾರ : ಒಬ್ಬ ಜೈಲು ಅಧಿಕಾರಿ ಜೈಲಿಗೆ ಹೋಗಿ 50 ಗಂಟೆ ಕಳೆದರೆ ಆತನನ್ನು ಸೇವೆಯಿಂದ ಅಮಾನತುಪಡಿಸಲಾಗುತ್ತದೆ. ಇದೇ ನಿಯಮ ಪ್ರಧಾನಮಂತ್ರಿ, ಮುಖ್ಯಮಂತ್ರಿ ಹಾಗೂ ಸಚಿವರಿಗೂ ಅನ್ವಯವಾಗಬೇಕಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ಉದ್ದೇಶಿತ ಕ್ರಿಮಿನಲ್ ಮೊಕದ್ದಮೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಬಿಹಾರದ ಗಯಾದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಸರ್ಕಾರಿ ಅಧಿಕಾರಿಯೊಬ್ಬ ಯಾವುದೋ ಪ್ರಕರಣದಲ್ಲಿ ಜೈಲು ಸೇರಿ 50 ಗಂಟೆ ಕಳೆದರೆ ಆತನನ್ನು ಸೇವೆಯಿಂದ ವಜಾ ಮಾಡುತ್ತೇವೆ. ಅದೇ ರೀತಿ ಉನ್ನತ ಸ್ಥಾನದಲ್ಲಿರುವ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರಿಗೂ ಈ ನಿಯಮ ಏಕೆ ಅನ್ವಯಿಸಬಾರದು? ಎಂದು ಪ್ರಶ್ನಿಸಿದರು.
ಜೈಲಿನ ಅಧೀಕ್ಷಕರೇ ಇರಲಿ, ಚಾಲಕ, ಕ್ಲರ್ಕ್, ಗುಮಾಸ್ತ ಸೇರಿದಂತೆ ಸರ್ಕಾರಿ ಅಧಿಕಾರಿಗಳು 50 ಗಂಟೆಯೊಳಗೆ ಜೈಲಿನಲ್ಲಿದ್ದರೆ ಸಹಜವಾಗಿ ಅಮಾನತುಗೊಳ್ಳುತ್ತಾರೆ. ಆದರೆ ಕೆಲವರು ಜೈಲಿನಲ್ಲಿ ಕುಳಿತುಕೊಂಡೇ ಅಧಿಕಾರ ಅನುಭವಿಸಬೇಕು ಎಂಬ ಕನಸು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಪ್ರತಿಪಕ್ಷದ ವಿರುದ್ಧ ಕಿಡಿಕಾರಿದರು.
ನಮ್ಮ ಎನ್ಡಿಎ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಸಮರವನ್ನೇ ಸಾರಿದೆ. ಹೀಗಾಗಿಯೇ ನಾವು ಕ್ರಿಮಿನಲ್ ಮೊಕದ್ದಮೆಯನ್ನು ಮಂಡಿಸಿದ್ದೇವೆ. ಪ್ರಧಾನಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರು 30 ದಿನ ಜೈಲಿನಲ್ಲಿದ್ದರೆ ಅವರನ್ನು ತೆಗೆದು ಹಾಕುವ ಕಾನೂನು ಇದರಲ್ಲಿದೆ ಎಂದು ಹೇಳಿದರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…