ನವದೆಹಲಿ: ದಶಕಗಳಿಗೆ ಒಮ್ಮೆ ಮಾಡುವ ಜನಗಣತಿಯನ್ನು ವಿಳಂಬ ಮಾಡಿದರೆ ಅನೇಕ ಸಾಮಾಜಿಕ ನೀತಿಗಳಿಗೆ ಧಕ್ಕೆಯುಂಟಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಜೈರಾಮ್ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, 2021 ರಿಂದ ಜನಗಣತಿ ಬಾಕಿಯಾಗಿಯೇ ಉಳಿದಿದೆ. ಈ ವರ್ಷ ನಡೆಸುವುದೂ ಅನುಮಾನವಾಗಿದೆ. ದೇಶದಲ್ಲಿ ಜನನ ಮತ್ತು ಮರಣಗಳ ಕುರಿತು ಕನಿಷ್ಠ ಎರಡು ಪ್ರಮುಖ ವರದಿಗಳನ್ನು ಕೇಂದ್ರ ಗೃಹ ಸಚಿವಾಲಯವು ಕಳೆದ ಐದು ವರ್ಷಗಳಿಂದ ಬಿಡುಗಡೆ ಮಾಡಿಲ್ಲ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಮತ್ತು ಆಹಾರ ಭದ್ರತೆಯ ಹಕ್ಕುಗಳು ಸೇರಿದಂತೆ ಅನೇಕ ಸಾಮಾಜಿಕ ನೀತಿಗಳು ಮತ್ತು ಕಾರ್ಯಕ್ರಮಗಳಿಗೆ ಹಾನಿಯುಂಟು ಮಾಡುತ್ತಿದೆ ಎಂದಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಜನಗಣತಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡದಿರುವುದು ನಿರಾಸೆಯನ್ನುಂಟು ಮಾಡಿದೆ. ಅಲ್ಲದೇ ಜನಗಣತಿಯನ್ನು ಸಮಯಕ್ಕೆ ಸರಿಯಾಗಿ ನಡೆಸಲು ಸರ್ಕಾರ ವಿಫಲವಾಗಿರುವುದು ರಾಜ್ಯದ ಆಡಳಿತಾತ್ಮಕ ಸಾಮರ್ಥ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟು ಮಾಡಲಿದೆ ಎಂದು ಹೇಳಿದ್ದಾರೆ.
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…