ದೇಶ- ವಿದೇಶ

ಜನಗಣತಿ ವಿಳಂಬದಿಂದ ಸಾಮಾಜಿಕ ನೀತಿಗಳಿಗೆ ಧಕ್ಕೆ: ಜೈರಾಮ್‌ ರಮೇಶ್‌ ಕಿಡಿ

ನವದೆಹಲಿ: ದಶಕಗಳಿಗೆ ಒಮ್ಮೆ ಮಾಡುವ ಜನಗಣತಿಯನ್ನು ವಿಳಂಬ ಮಾಡಿದರೆ ಅನೇಕ ಸಾಮಾಜಿಕ ನೀತಿಗಳಿಗೆ ಧಕ್ಕೆಯುಂಟಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ ಜೈರಾಮ್‌ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, 2021 ರಿಂದ ಜನಗಣತಿ ಬಾಕಿಯಾಗಿಯೇ ಉಳಿದಿದೆ. ಈ ವರ್ಷ ನಡೆಸುವುದೂ ಅನುಮಾನವಾಗಿದೆ. ದೇಶದಲ್ಲಿ ಜನನ ಮತ್ತು ಮರಣಗಳ ಕುರಿತು ಕನಿಷ್ಠ ಎರಡು ಪ್ರಮುಖ ವರದಿಗಳನ್ನು ಕೇಂದ್ರ ಗೃಹ ಸಚಿವಾಲಯವು ಕಳೆದ ಐದು ವರ್ಷಗಳಿಂದ ಬಿಡುಗಡೆ ಮಾಡಿಲ್ಲ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಮತ್ತು ಆಹಾರ ಭದ್ರತೆಯ ಹಕ್ಕುಗಳು ಸೇರಿದಂತೆ ಅನೇಕ ಸಾಮಾಜಿಕ ನೀತಿಗಳು ಮತ್ತು ಕಾರ್ಯಕ್ರಮಗಳಿಗೆ ಹಾನಿಯುಂಟು ಮಾಡುತ್ತಿದೆ ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಭಾಷಣದಲ್ಲಿ ಜನಗಣತಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡದಿರುವುದು ನಿರಾಸೆಯನ್ನುಂಟು ಮಾಡಿದೆ. ಅಲ್ಲದೇ ಜನಗಣತಿಯನ್ನು ಸಮಯಕ್ಕೆ ಸರಿಯಾಗಿ ನಡೆಸಲು ಸರ್ಕಾರ ವಿಫಲವಾಗಿರುವುದು ರಾಜ್ಯದ ಆಡಳಿತಾತ್ಮಕ ಸಾಮರ್ಥ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟು ಮಾಡಲಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago