ದೇಶ- ವಿದೇಶ

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರನ್ನು ಭೇಟಿ ಮಾಡಿದ ಜೈಶಂಕರ್

ಬೀಜಿಂಗ್ : ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಎಸ್‌ಸಿಒ ಸದಸ್ಯ ರಾಷ್ಟ್ರಗಳ ಅವರ ಸಹವರ್ತಿಗಳು ಇಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಜೈಶಂಕರ್ ಅವರು ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿನ ಇತ್ತೀಚಿನ ಬೆಳವಣಿಗೆಯ ಬಗ್ಗೆ ಅಧ್ಯಕ್ಷ ಕ್ಸಿ ಅವರಿಗೆ ಮಾಹಿತಿ ನೀಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ಸಮಾವೇಶದಲ್ಲಿ ಭಾಗವಹಿಸಲು ವಿದೇಶಾಂಗ ಸಚಿವರು ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ಬಂದಿಳಿದರು. ಜೂನ್ 2020 ರಲ್ಲಿ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ದ್ವಿಪಕ್ಷೀಯ ಸಂಬಂಧಗಳು ತೀವ್ರ ಕುಸಿತ ಕಂಡ ನಂತರ ಇದು ಅವರ ಮೊದಲ ಚೀನಾ ಭೇಟಿಯಾಗಿದೆ.

ಮಂಗಳವಾರ ಬೆಳಿಗ್ಗೆ ಬೀಜಿಂಗ್‌ನಲ್ಲಿ ನನ್ನ ಸಹವರ್ತಿ ಎಸ್‌ಸಿಒ ವಿದೇಶಾಂಗ ಸಚಿವರೊಂದಿಗೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿದೆ ಎಂದು ಜೈಶಂಕರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಶುಭಾಶಯಗಳನ್ನು ತಿಳಿಸಿದ್ದೇನೆ ಎಂದು ಅವರು ಹೇಳಿದರು.

ನಮ್ಮ ದ್ವಿಪಕ್ಷೀಯ ಸಂಬಂಧಗಳ ಇತ್ತೀಚಿನ ಬೆಳವಣಿಗೆಯ ಬಗ್ಗೆ ಅಧ್ಯಕ್ಷ ಕ್ಸಿ ಅವರಿಗೆ ಮಾಹಿತಿ ನೀಡಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ನಾಯಕರ ಮಾರ್ಗದರ್ಶನವನ್ನು ಗೌರವಿಸುತ್ತೇನೆ ಎಂದು ವಿದೇಶಾಂಗ ಸಚಿವ ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago