ದೇಶ- ವಿದೇಶ

ಭಾರೀ ಬಿಗಿ ಭದ್ರತೆಯಲ್ಲಿ ಅಮರನಾಥ ಯಾತ್ರೆ 2024 ಆರಂಭ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಅಮರನಾಥ ಯಾತ್ರೆ 2024ನ್ನು ಆರಂಭಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ ಚಾಲನೆ ಸಿಕ್ಕಿದ್ದು, ವಿವಿಧ ಬೇಸ್‌ ಕ್ಯಾಂಪ್‌ಗಳಿಂದ ನೋಂದಣಿ ಮಾಡಿಕೊಂಡ ಯಾತ್ರಾರ್ಥಿಗಳು ಅಮರನಾಥ ಯಾತ್ರೆ ಆರಂಭಿಸಿದ್ದಾರೆ. ಯಾತ್ರೆಯ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.

2024ನೇ ಸಾಲಿನ ಅಮರನಾಥ ಯಾತ್ರೆ ಇಂದು ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯಲ್ಲಿರುವ ಬಾಲ್ಟಾಸ್‌ ಬೇಸ್‌ ಕ್ಯಾಂಪ್‌ನಲ್ಲಿರುವ ಪವಿತ್ರ ಗುಹೆಗೆ ಭೇಟಿ ನೀಡಲು ಯಾತ್ರೆ ಆರಂಭಿಸಿದರು.

ಅಮರನಾಥ ಯಾತ್ರೆ 2024ರ ಒಟ್ಟು 52 ದಿನಗಳ ಕಾಲ ನಡೆಯಲಿದೆ. ಶ್ರೀನಗರದಿಂದ ಸುಮಾರು 1.5 ಕಿ.ಮೀ ದೂರದಲ್ಲಿ 13,000 ಅಡಿ ಎತ್ತರವಿರುವ ಅಮರನಾಥ ಗುಹೆಗೆ ಪ್ರತಿವರ್ಷ ದೇಶದ ವಿವಿಧ ರಾಜ್ಯಗಳ ಭಕ್ತರು ಯಾತ್ರೆ ಕೈಗೊಳ್ಳುತ್ತಾರೆ.

ಅಮರನಾಥ ಯಾತ್ರೆ ಬಹಳ ಪುಣ್ಯದ ಕೆಲಸ ಎಂದು ಹಿಂದುಗಳು ನಂಬುತ್ತಾರೆ. ಪ್ರತಿವರ್ಷ ಮಳೆ, ಚಳಿಯನ್ನು ಲೆಕ್ಕಿಸದೇ ಲಕ್ಷಾಂತರ ಯಾತ್ರಾರ್ಥಿಗಳು ಅಮರನಾಥ ಯಾತ್ರೆಗಾಗಿ ಜಮ್ಮು-ಕಾಶ್ಮೀರಕ್ಕೆ ಆಗಮಿಸುತ್ತಾರೆ.

ಅಮರನಾಥ ಯಾತ್ರಾರ್ಥಿಗಳ ಮೇಲೆ ಭಯೋತ್ಪಾದಕ ದಾಳಿಗಳು ಹಲವು ಬಾರಿ ನಡೆದಿದೆ. ಆದ್ದರಿಂದ ಕೇಂದ್ರ ಸರ್ಕಾರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಹೆಚ್ಚುವರಿ ಬಂದೋಬಸ್ತ್‌ ಮಾಡುತ್ತದೆ. ಜಮ್ಮು-ಕಾಶ್ಮೀರದ ಪೊಲೀಸರ ಜೊತೆ ಭಾರತೀಯ ಸೇನೆಯ ಯೋಧರು ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಾರೆ.

ಅಮರನಾಥ ಯಾತ್ರೆ 2024ರ ಭದ್ರತೆಗಾಗಿ 13 ಪೊಲೀಸ್‌ ತಂಡಗಳು, ಎಸ್‌ಡಿಆರ್‌ಎಫ್‌ನ 11 ತಂಡಗಳು, ಬಿಎಸ್‌ಎಫ್‌ನ 4 ತಂಡಗಳು, ಸಿಆರ್‌ಪಿಎಫ್‌ಎ 2 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಉಧಮ್‌ಪುರ್‌ನಿಂದ ಬನಿಹಾಲ್‌ ತನಕ 10 ಅತ್ಯಾಧುನಿಕ ಕ್ಯಾಮರಾ ಅಳವಡಿಕೆ ಮಾಡಿ ಕಣ್ಗಾವಲು ವಹಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

2 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

3 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

3 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

3 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

3 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

3 hours ago