ದೇಶ- ವಿದೇಶ

ಭಾರೀ ಬಿಗಿ ಭದ್ರತೆಯಲ್ಲಿ ಅಮರನಾಥ ಯಾತ್ರೆ 2024 ಆರಂಭ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಅಮರನಾಥ ಯಾತ್ರೆ 2024ನ್ನು ಆರಂಭಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ ಚಾಲನೆ ಸಿಕ್ಕಿದ್ದು, ವಿವಿಧ ಬೇಸ್‌ ಕ್ಯಾಂಪ್‌ಗಳಿಂದ ನೋಂದಣಿ ಮಾಡಿಕೊಂಡ ಯಾತ್ರಾರ್ಥಿಗಳು ಅಮರನಾಥ ಯಾತ್ರೆ ಆರಂಭಿಸಿದ್ದಾರೆ. ಯಾತ್ರೆಯ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.

2024ನೇ ಸಾಲಿನ ಅಮರನಾಥ ಯಾತ್ರೆ ಇಂದು ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯಲ್ಲಿರುವ ಬಾಲ್ಟಾಸ್‌ ಬೇಸ್‌ ಕ್ಯಾಂಪ್‌ನಲ್ಲಿರುವ ಪವಿತ್ರ ಗುಹೆಗೆ ಭೇಟಿ ನೀಡಲು ಯಾತ್ರೆ ಆರಂಭಿಸಿದರು.

ಅಮರನಾಥ ಯಾತ್ರೆ 2024ರ ಒಟ್ಟು 52 ದಿನಗಳ ಕಾಲ ನಡೆಯಲಿದೆ. ಶ್ರೀನಗರದಿಂದ ಸುಮಾರು 1.5 ಕಿ.ಮೀ ದೂರದಲ್ಲಿ 13,000 ಅಡಿ ಎತ್ತರವಿರುವ ಅಮರನಾಥ ಗುಹೆಗೆ ಪ್ರತಿವರ್ಷ ದೇಶದ ವಿವಿಧ ರಾಜ್ಯಗಳ ಭಕ್ತರು ಯಾತ್ರೆ ಕೈಗೊಳ್ಳುತ್ತಾರೆ.

ಅಮರನಾಥ ಯಾತ್ರೆ ಬಹಳ ಪುಣ್ಯದ ಕೆಲಸ ಎಂದು ಹಿಂದುಗಳು ನಂಬುತ್ತಾರೆ. ಪ್ರತಿವರ್ಷ ಮಳೆ, ಚಳಿಯನ್ನು ಲೆಕ್ಕಿಸದೇ ಲಕ್ಷಾಂತರ ಯಾತ್ರಾರ್ಥಿಗಳು ಅಮರನಾಥ ಯಾತ್ರೆಗಾಗಿ ಜಮ್ಮು-ಕಾಶ್ಮೀರಕ್ಕೆ ಆಗಮಿಸುತ್ತಾರೆ.

ಅಮರನಾಥ ಯಾತ್ರಾರ್ಥಿಗಳ ಮೇಲೆ ಭಯೋತ್ಪಾದಕ ದಾಳಿಗಳು ಹಲವು ಬಾರಿ ನಡೆದಿದೆ. ಆದ್ದರಿಂದ ಕೇಂದ್ರ ಸರ್ಕಾರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಹೆಚ್ಚುವರಿ ಬಂದೋಬಸ್ತ್‌ ಮಾಡುತ್ತದೆ. ಜಮ್ಮು-ಕಾಶ್ಮೀರದ ಪೊಲೀಸರ ಜೊತೆ ಭಾರತೀಯ ಸೇನೆಯ ಯೋಧರು ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಾರೆ.

ಅಮರನಾಥ ಯಾತ್ರೆ 2024ರ ಭದ್ರತೆಗಾಗಿ 13 ಪೊಲೀಸ್‌ ತಂಡಗಳು, ಎಸ್‌ಡಿಆರ್‌ಎಫ್‌ನ 11 ತಂಡಗಳು, ಬಿಎಸ್‌ಎಫ್‌ನ 4 ತಂಡಗಳು, ಸಿಆರ್‌ಪಿಎಫ್‌ಎ 2 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಉಧಮ್‌ಪುರ್‌ನಿಂದ ಬನಿಹಾಲ್‌ ತನಕ 10 ಅತ್ಯಾಧುನಿಕ ಕ್ಯಾಮರಾ ಅಳವಡಿಕೆ ಮಾಡಿ ಕಣ್ಗಾವಲು ವಹಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

12 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

14 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

15 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

15 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

15 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

18 hours ago