ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಅಮರನಾಥ ಯಾತ್ರೆ 2024ನ್ನು ಆರಂಭಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ ಚಾಲನೆ ಸಿಕ್ಕಿದ್ದು, ವಿವಿಧ ಬೇಸ್ ಕ್ಯಾಂಪ್ಗಳಿಂದ ನೋಂದಣಿ ಮಾಡಿಕೊಂಡ ಯಾತ್ರಾರ್ಥಿಗಳು ಅಮರನಾಥ ಯಾತ್ರೆ ಆರಂಭಿಸಿದ್ದಾರೆ. ಯಾತ್ರೆಯ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.
2024ನೇ ಸಾಲಿನ ಅಮರನಾಥ ಯಾತ್ರೆ ಇಂದು ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿರುವ ಬಾಲ್ಟಾಸ್ ಬೇಸ್ ಕ್ಯಾಂಪ್ನಲ್ಲಿರುವ ಪವಿತ್ರ ಗುಹೆಗೆ ಭೇಟಿ ನೀಡಲು ಯಾತ್ರೆ ಆರಂಭಿಸಿದರು.
ಅಮರನಾಥ ಯಾತ್ರೆ 2024ರ ಒಟ್ಟು 52 ದಿನಗಳ ಕಾಲ ನಡೆಯಲಿದೆ. ಶ್ರೀನಗರದಿಂದ ಸುಮಾರು 1.5 ಕಿ.ಮೀ ದೂರದಲ್ಲಿ 13,000 ಅಡಿ ಎತ್ತರವಿರುವ ಅಮರನಾಥ ಗುಹೆಗೆ ಪ್ರತಿವರ್ಷ ದೇಶದ ವಿವಿಧ ರಾಜ್ಯಗಳ ಭಕ್ತರು ಯಾತ್ರೆ ಕೈಗೊಳ್ಳುತ್ತಾರೆ.
ಅಮರನಾಥ ಯಾತ್ರೆ ಬಹಳ ಪುಣ್ಯದ ಕೆಲಸ ಎಂದು ಹಿಂದುಗಳು ನಂಬುತ್ತಾರೆ. ಪ್ರತಿವರ್ಷ ಮಳೆ, ಚಳಿಯನ್ನು ಲೆಕ್ಕಿಸದೇ ಲಕ್ಷಾಂತರ ಯಾತ್ರಾರ್ಥಿಗಳು ಅಮರನಾಥ ಯಾತ್ರೆಗಾಗಿ ಜಮ್ಮು-ಕಾಶ್ಮೀರಕ್ಕೆ ಆಗಮಿಸುತ್ತಾರೆ.
ಅಮರನಾಥ ಯಾತ್ರಾರ್ಥಿಗಳ ಮೇಲೆ ಭಯೋತ್ಪಾದಕ ದಾಳಿಗಳು ಹಲವು ಬಾರಿ ನಡೆದಿದೆ. ಆದ್ದರಿಂದ ಕೇಂದ್ರ ಸರ್ಕಾರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಹೆಚ್ಚುವರಿ ಬಂದೋಬಸ್ತ್ ಮಾಡುತ್ತದೆ. ಜಮ್ಮು-ಕಾಶ್ಮೀರದ ಪೊಲೀಸರ ಜೊತೆ ಭಾರತೀಯ ಸೇನೆಯ ಯೋಧರು ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಾರೆ.
ಅಮರನಾಥ ಯಾತ್ರೆ 2024ರ ಭದ್ರತೆಗಾಗಿ 13 ಪೊಲೀಸ್ ತಂಡಗಳು, ಎಸ್ಡಿಆರ್ಎಫ್ನ 11 ತಂಡಗಳು, ಬಿಎಸ್ಎಫ್ನ 4 ತಂಡಗಳು, ಸಿಆರ್ಪಿಎಫ್ಎ 2 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಉಧಮ್ಪುರ್ನಿಂದ ಬನಿಹಾಲ್ ತನಕ 10 ಅತ್ಯಾಧುನಿಕ ಕ್ಯಾಮರಾ ಅಳವಡಿಕೆ ಮಾಡಿ ಕಣ್ಗಾವಲು ವಹಿಸಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…