ಜಮ್ಮುಕಾಶ್ಮೀರ: ಕಣಿವೆನಾಡು ಜಮ್ಮು ಕಾಶ್ಮೀರ ವಸತಿಗೃಹವೊಂದರಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಆರು ಜನರ ಮೃತದೇಹ ಪತ್ತೆಯಾಗಿದೆ. ಜಮ್ಮು ನಗರದ ಸಿಧ್ರಾ ಪ್ರದೇಶದಲ್ಲಿ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ.
ಸಿಧ್ರಾದ ತವಿ ವಿಹಾರ್ ಪ್ರದೇಶದ ಎರಡು ವಸತಿಗೃಹಗಳಲ್ಲಿ ಈ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುದ್ದಿ ತಿಳಿದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶವಗಳನ್ನು ಸುಪರ್ದಿಗೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಟ್ಟಿದ್ದಾರೆ.
ಮೃತರೆಲ್ಲರೂ ಕಾಶ್ಮೀರದವರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಮ್ಮು ಜೆಎಂಸಿಯ ಹಿರಿಯ ವೈದ್ಯರೊಬ್ಬರು ಈ ಎಲ್ಲಾ ಮೃತದೇಹಗಳಿಗೆ ಡ್ರಿಪ್ ಅಳವಡಿಸಲಾಗಿತ್ತು. ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವೇ ತಿಳಿದು ಬರಲಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಎಲ್ಲಾ ಮೃತರ ವಾರಸುದಾರರು ಜಮ್ಮುವಿಗೆ ಆಗಮಿಸಿದ ನಂತರ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ಕೂಡ ರಚಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಮೃತರನ್ನು ದಿವಂಗತ ಗುಲಾಂ ಹಸನ್ ಅವರ ಪತ್ನಿ ಸಕೀನಾ ಬೇಗಂ, ಅವರ ಮಗಳು ನಸೀಮಾ ಅಖ್ತರ್, ರುಬಿನಾ ಬಾನೋ, ಜಾಫರ್ ಅಲಿ, ಹಬೀಬುಲ್ಲಾ ಅವರ ಮಗ ನೂರ್-ಉಲ್-ಹಬೀಬ್ ಮತ್ತು ಫಾರೂಕ್ ಅಹ್ಮದ್ ಮಗ್ರೇ ಅವರ ಪುತ್ರ ಸಜದ್ ಅಹ್ಮದ್ ಎಂದು ಗುರುತಿಸಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…