ಕದನ ವಿರಾಮದ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಜಮ್ಮು ಮತ್ತು ಕಾಶ್ಮೀರ

ಶ್ರೀನಗರ: ಸುಮಾರು 21 ದಿನಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಶಾಂತಿಯುತವಾಗಿದ್ದು, ನಿಧಾನವಾಗಿ ಕಣಿವೆ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿರುವುದು ನಾಗರಿಕರಲ್ಲಿ ಹೊಸ ಆಶಾಕಿರಣ ಮೂಡಿಸಿದೆ.

ಯಾವುದೇ ಹೊಸ ಘಟನೆಗಳು ಅಥವಾ ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. ಹಲವು ದಿನಗಳಲ್ಲಿ ಮೊದಲ ಬಾರಿಗೆ, ಪೂಂಚ್ ಮತ್ತು ರಜೌರಿ ಸೇರಿದಂತೆ ಜಮ್ಮು ಪ್ರದೇಶದ ಸ್ಥಳೀಯರು ವಿಮಾನ, ಕ್ಷಿಪಣಿ ದಾಳಿ ಮತ್ತು ಡ್ರೋನ್ ಚಟುವಟಿಕೆಗಳಿಂದ ಮುಕ್ತವಾದ ಶಾಂತಿಯುತ ರಾತ್ರಿಯನ್ನು ಆನಂದಿಸಿದ್ದಾರೆ. ಶಾಂತತೆಯಿಂದಾಗಿ ನಿವಾಸಿಗಳು ತಮ್ಮ ಸಾಮಾನ್ಯ ದಿನಚರಿಗೆ ಮರಳಲು ಅವಕಾಶ ಮಾಡಿಕೊಟ್ಟಿತು. ದಾಳಿಯ ಆತಂಕವಿತ್ತಾದರೂ ಅಂತಹ ಯಾವುದೇ ಘಟನೆಗಳು ನಡೆಯಲಿಲ್ಲ.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದಕ್ಕೆ ಬಂದ ಬಳಿಕವೂ ರಾತ್ರಿ ಡ್ರೋನ್ ದಾಳಿ ಪ್ರಯತ್ನಗಳು ನಡೆದಿದ್ದವು. ಆದರೆ ಭಾನುವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರ ಶಾಂತಿಯುತ ರಾತ್ರಿಯನ್ನು ಕಂಡಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬತ್ರ್ವಾಲ್ ತಿಳಿಸಿದ್ದಾರೆ.

ಗಡಿ ರಾಜ್ಯಗಳಾದ್ಯಂತದ ನಗರಗಳಲ್ಲಿ ಸಾಮಾನ್ಯತೆಯ ಲಕ್ಷಣಗಳನ್ನು ಕಾಣತೊಡಗಿದೆ. ಭಾನುವಾರ ಮತ್ತು ಸೋಮವಾರಗಳ ನಡುವಿನ ರಾತ್ರಿಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಭಾರತದ ಖಡಕ್ ಎಚ್ಚರಿಕೆ ಬೆನ್ನಲ್ಲೇ ತಡರಾತ್ರಿ ಬಳಿಕ ಕಾಶ್ಮೀರ ಸೇರಿದಂತೆ ಗಡಿಯ 4 ರಾಜ್ಯಗಳಲ್ಲಿ ಎಲ್ಲಿಯೂ ಕದನ ವಿರಾಮ ಉಲ್ಲಂಘಿಸುವ ಗೋಜಿಗೆ ಹೋಗಿಲ್ಲ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

1 hour ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago