ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಕಾಳಗ ಮುಂದುವರಿದಿದ್ದು, ಇಂದು ನಡೆದ ಎನ್ಕೌಂಟರ್ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಯೋತ್ಪಾದಕರು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳು ಯೋಧರನ್ನು ಜಮ್ಮು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎನ್ಒಸಿ ಬಳಿಯಿರುವ ಕುಮ್ಕಡಿಯಲ್ಲಿ ಸೇನಾ ಪೋಸ್ಟ್ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ ಎನ್ನಲಾಗಿದ್ದು, ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ನಿಂದಲೇ ಈ ದಾಳಿಯಾಗಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಕಾರ್ಗಿಲ್ ವಿಜಯ್ ದಿವಸ್ ಆದ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದರು. ಭಾರತೀಯ ಸೇನೆಯು ಪ್ರತಿ ಭಯೋತ್ಪಾದಕ ಸವಾಲನ್ನು ಸೋಲಿಸುತ್ತದೆ ಎಂದು ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದರು.
ಆದರೂ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಪದೇ ಪದೇ ದಾಳಿ ನಡೆಸುತ್ತಿದ್ದು, ಭಯೋತ್ಪಾದಕರಿಗೆ ಭಾರತೀಯ ಸೇನೆ ಪ್ರತ್ಯುತ್ತರ ಕೂಡ ನೀಡುತ್ತಿದೆ. ಇತ್ತೀಚೆಗೆ ನಡೆದ ಎಲ್ಲಾ ಎನ್ಕೌಂಟರ್ನಲ್ಲಿಯೂ ಹಲವಾರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಉಗ್ರರ ದಾಳಿಯನ್ನು ತಡೆಗಟ್ಟಲು ಹೊಸ ಹೆಜ್ಜೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…
ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…
ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…