ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಮೊಡೆರ್ಗಾಮ್ ಗ್ರಾಮದಲ್ಲಿ ಭದ್ರತಾ ಸಿಬ್ಬಂದಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೂ ಕಾರ್ಯಾಚರಣೆ ಮತ್ತೆ ಮುಂದುವರಿದಿದ್ದು, ಉಗ್ರರ ವಿರುದ್ಧ ಸೆದೆಬಡಿಯಲು ಸೇನೆ ಸರ್ವ ರೀತಿಯಲ್ಲೂ ಸಜ್ಜಾಗಿದೆ.
ಇನ್ನೂ ಜಮ್ಮು-ಕಾಶ್ಮೀರದಲ್ಲಿ ಕಳೆದ ೧೫ ದಿನಗಳಿಂದಲೂ ಉಗ್ರರು ಹಾಗೂ ಭಾರತೀಯ ಸೇನೆಯ ನಡುವೆ ಗುಂಡಿನ ಚಕಮಕಿ ನಡೆಯುತ್ತಲೇ ಇದೆ. ಹೀಗಿರುವಾಗಲೇ ಇಂದು ಓರ್ವ ಭಾರತೀಯ ಯೋಧ ಸಾವನ್ನಪ್ಪಿರುವುದು ಎಲ್ಲರಿಗೂ ಭಾರೀ ಬೇಸರ ತರಿಸಿದ್ದು, ಉಗ್ರರನ್ನು ಸೆದೆಬಡಿಯಲೇಬೇಕು ಎಂದು ಭಾರತೀಯ ಸೇನೆ ಪಣತೊಟ್ಟಿದೆ.
ಇಲ್ಲಿನ ಮಣ್ಣು ಮನೆಯ ಬಳಿ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಮಣ್ಣ ಮನೆಯನ್ನು ಭಾರತೀಯ ಸೇನೆ ಸುತ್ತುವರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…