ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಉಧಮ್ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.
ಈ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿದ್ದು, ಉಗ್ರರು ಅಡಗಿರುವ ತಾಣಗಳ ಬಳಿ ಹೆಚ್ಚಿನ ಯೋಧರನ್ನು ನಿಯೋಜಿಸಲಾಗಿದೆ.
ಸಿಆರ್ಪಿಎಫ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಉಧಮ್ಪುರದ ದಾದು ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಒಳಗಾಗಿದೆ.
ಕಾಶ್ಮೀರಕ್ಕೆ ಹೋಲಿಸಿದರೆ ಹಲವಾರು ವರ್ಷಗಳ ಕಾಲ ಶಾಂತವಾಗಿದ್ದ ಜಮ್ಮು ಪ್ರದೇಶದಲ್ಲಿ ಇದೀಗ ಗುಂಡಿನ ಸದ್ದು ಕೇಳಿ ಬಂದಿದೆ. ಜಮ್ಮುವಿನಲ್ಲಿ ದಟ್ಟವಾದ ಕಾಡುಗಳು ಹಾಗೂ ಭಯೋತ್ಪಾದಕರು ಅಡಗಿಕೊಳ್ಳಲು ಸೂಕ್ತ ಕಡಿದಾದ ಪರ್ವತಗಳಿವೆ.
ಈ ಹಿನ್ನೆಲೆಯಲ್ಲಿ ಭಯೋತ್ಪಾದಕರ ಹಾವಳಿ ಹೆಚ್ಚಾಗಿದ್ದು, ಪೊಲೀಸರು ಹಾಗೂ ಭಾರತೀಯ ಸೇನೆ ಈ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಟ್ಟಿದೆ.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…