ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಉಧಮ್ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.
ಈ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿದ್ದು, ಉಗ್ರರು ಅಡಗಿರುವ ತಾಣಗಳ ಬಳಿ ಹೆಚ್ಚಿನ ಯೋಧರನ್ನು ನಿಯೋಜಿಸಲಾಗಿದೆ.
ಸಿಆರ್ಪಿಎಫ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಉಧಮ್ಪುರದ ದಾದು ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಒಳಗಾಗಿದೆ.
ಕಾಶ್ಮೀರಕ್ಕೆ ಹೋಲಿಸಿದರೆ ಹಲವಾರು ವರ್ಷಗಳ ಕಾಲ ಶಾಂತವಾಗಿದ್ದ ಜಮ್ಮು ಪ್ರದೇಶದಲ್ಲಿ ಇದೀಗ ಗುಂಡಿನ ಸದ್ದು ಕೇಳಿ ಬಂದಿದೆ. ಜಮ್ಮುವಿನಲ್ಲಿ ದಟ್ಟವಾದ ಕಾಡುಗಳು ಹಾಗೂ ಭಯೋತ್ಪಾದಕರು ಅಡಗಿಕೊಳ್ಳಲು ಸೂಕ್ತ ಕಡಿದಾದ ಪರ್ವತಗಳಿವೆ.
ಈ ಹಿನ್ನೆಲೆಯಲ್ಲಿ ಭಯೋತ್ಪಾದಕರ ಹಾವಳಿ ಹೆಚ್ಚಾಗಿದ್ದು, ಪೊಲೀಸರು ಹಾಗೂ ಭಾರತೀಯ ಸೇನೆ ಈ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಟ್ಟಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…