ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಉಧಮ್ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.
ಈ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿದ್ದು, ಉಗ್ರರು ಅಡಗಿರುವ ತಾಣಗಳ ಬಳಿ ಹೆಚ್ಚಿನ ಯೋಧರನ್ನು ನಿಯೋಜಿಸಲಾಗಿದೆ.
ಸಿಆರ್ಪಿಎಫ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಉಧಮ್ಪುರದ ದಾದು ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಒಳಗಾಗಿದೆ.
ಕಾಶ್ಮೀರಕ್ಕೆ ಹೋಲಿಸಿದರೆ ಹಲವಾರು ವರ್ಷಗಳ ಕಾಲ ಶಾಂತವಾಗಿದ್ದ ಜಮ್ಮು ಪ್ರದೇಶದಲ್ಲಿ ಇದೀಗ ಗುಂಡಿನ ಸದ್ದು ಕೇಳಿ ಬಂದಿದೆ. ಜಮ್ಮುವಿನಲ್ಲಿ ದಟ್ಟವಾದ ಕಾಡುಗಳು ಹಾಗೂ ಭಯೋತ್ಪಾದಕರು ಅಡಗಿಕೊಳ್ಳಲು ಸೂಕ್ತ ಕಡಿದಾದ ಪರ್ವತಗಳಿವೆ.
ಈ ಹಿನ್ನೆಲೆಯಲ್ಲಿ ಭಯೋತ್ಪಾದಕರ ಹಾವಳಿ ಹೆಚ್ಚಾಗಿದ್ದು, ಪೊಲೀಸರು ಹಾಗೂ ಭಾರತೀಯ ಸೇನೆ ಈ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಟ್ಟಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…