ದೇಶ- ವಿದೇಶ

ಭಯೋತ್ಪಾದಕ ದಾಳಿ : ಜಾಗತಿಕ ನಾಯಕರ ಖಂಡನೆ

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಮೂಲದ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು 28 ಮಂದಿ ಮೇಲೆ ದಾಳಿ ಸಾವಿಗೆ ಕಾರಣರಾಗಿದ್ದಾರೆ. ಈ ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ರಷ್ಯ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸೇರಿದಂತೆ ಜಾಗತಿಕ ನಾಯಕರು ಖಂಡಿಸಿ, ಭಾರತದ ಜೊತೆಗೆ ಒಗ್ಗಟ್ಟ ಪ್ರದರ್ಶಿಸಿದ್ದಾರೆ.

ಭಾರತಕ್ಕೆ ಬೆಂಬಲ
ಪ್ರಧಾನಿ ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಟ್ರಂಪ್‌, ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತೇನೆ. ಅಪರಾಧಿಗಳಿಗೆ ಶಿಕ್ಷಿಸಲು ಭಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿದೆ ಹೇಳಿದ್ದಾರೆ.

ಭಾರತಕ್ಕೆ ಸಹಕಾರ ಹೆಚ್ಚಿಸಲು ಬದ್ಧ
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃಟಪಟ್ಟವರ ಕುಟುಂಬಗಳಿಗೆ ಸಂತಾಪಗಳು, ಪ್ರಧಾನಿ ಮೋದಿ ಅವರ ಜೊತೆ ಮಾತನಾಡಿದ್ದೇನೆ. ಈ ಕ್ರೂರ ಅಪರಾಧಕ್ಕೆ ಯಾವುದೇ ಸಮರ್ಥನೆ ಇಲ್ಲ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು. ಭಯೋತ್ಪಾದನೆಯ ವಿರುದ್ಧ ಹೋರಾಡುವಲ್ಲಿ ಭಾರತೀಯದೊಂದಿಗೆ ಎಲ್ಲಾ ರೀತಿಯ ಸಹಕಾರವನ್ನು ಹೆಚ್ಚಿಸಲು ಬದ್ಧ ಎಂದು ರಷ್ಟಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಹೇಳಿದ್ದಾರೆ.

ಭಾರತದೊಂದಿಗೆ ಇಸ್ರೇಲ್‌
ಅಮಾಯಕರ ಸಾವಿಗೆ ಕಾರಣವಾದ ಅಮಾನುಷ ಭಯೋತ್ಪಾದಕ ದಾಳಿಯಿಂದ ತೀವ್ರ ದುಃಖಿತರಾಗಿದ್ದೇವೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್‌ ಭಾರತದೊಂದಿಗೆ ನಿಂತಿದೆ ಎಂದು ಅವರು ಹೇಳಿದ್ದಾರೆ.

ಇನ್ನೂ ಭಾರತದಲ್ಲೇ ಪ್ರವಾಸದಲ್ಲಿರುವ ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್‌, ವಿನಾಶಕಾರಿ ಭಯೋತ್ಪಾದಕ ದಾಳಿಯ ಮೃತರ ಕುಟುಂಬಕ್ಕೆ ಸಂತಾಪ ಹೇಳಿದ್ದಾರೆ. ನಾನು ಮತ್ತು ಉಷಾ ಸಂತಾಪ ಸೂಚಿಸುತ್ತೇವೆ. ನಾವು ಅವರ ನೋವನ್ನು ಹಂಚಿಕೊಳ್ಳಲು ಬಯಸುತ್ತೆವೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

7 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

11 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

11 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

11 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

11 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

12 hours ago