ದೇಶ- ವಿದೇಶ

ಜಮ್ಮು ಕಾಶ್ಮೀರ : ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಲೋಕಾರ್ಪಣೆಗೆ ಸಿದ್ದ

ಜಮ್ಮು ಕಾಶ್ಮೀರ:  ಜಮ್ಮು ಕಾಶ್ಮೀರದ ಚೀನಾಬ್‌ ನದಿಯ ಮೇಲೆ ನಿರ್ಮಾಣವಾಗುತ್ತಿದ್ದ ಜಗತ್ತಿನ ಅತಿ ಎತ್ತರದ ರೈಲ್ವೆ ಸೇತುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಶುಭ ಗಳಿಗೆಯಲ್ಲಿ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಅದರೊಂದಿಗೆ, ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿ ಶ್ರೀನಗರಕ್ಕೆ ದೇಶದ ಇನ್ನಿತರ ಭಾಗದಿಂದ ರೈಲ್ವೆ ಸಂಪರ್ಕ ಕಲ್ಪಿಸುವ ಸನ್ನಿವೇಶ ಸನ್ನಿಹಿತವಾಗಿದೆ. ಹೀಗಾಗಿಯೇ ಇದು ದೇಶವನ್ನು ಜೋಡಿಸುವ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರೈಲ್ವೆ ಸೇತುವೆ ಎರಡು ಭಾಗಗಳು ಮಧ್ಯಭಾಗದಲ್ಲಿ ಸೇರುವ ಗೋಲ್ಡನ್‌ ಜಾಯಿಂಟ್‌ ಕಾಮಗಾರಿಯನ್ನು ಶನಿವಾರ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಇದರೊಂದಿಗೆ ಯೋಜನೆಯ ಶೇ. 98ರಷ್ಟು ಕಾಮಗಾರಿ ಪೂರ್ಣಗೊಂಡಂತೆ ಆಗಿದೆ. ಉಗ್ರರ ಸ್ಫೋಟದ ತೀವ್ರತೆಯನ್ನೂ ತಡೆದುಕೊಳ್ಳುವ ಶಕ್ತಿ ಹೊಂದಿರುವ ಈ ಕಬ್ಬಿಣದ ಸೇತುವೆ ಫ್ರಾನ್ಸ್‌ನ ಐಫೆಲ್‌ ಟವರ್‌ಗಿಂತ 35 ಮೀಟರ್‌ ಹೆಚ್ಚು ಎತ್ತರವಿದೆ. ಈವರೆಗೆ ಜಗತ್ತಿನ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆ ಗಳಿಸಿದ್ದ ಚೀನಾದ ಬೇಪಾನ್‌ಜಿಯಾಂಗ್‌ ನದಿಯ ಮೇಲಿನ ಉಕ್ಕಿನ ಸೇತುವೆಯನ್ನು (275 ಮೀಟರ್‌ ಎತ್ತರ) ಇದು ಹಿಂದಿಕ್ಕಿ ನಂ.1 ಎತ್ತರದ ಸೇತುವೆ ಎಂಬ ಹಿರಿಮೆಗೆ ಪಾತ್ರವಾಗಿದೆ.

ಸ್ವತಂತ್ರ ಭಾರತದ ಇತಿಹಾಸದಲ್ಲೇ ಅತ್ಯದ್ಭುತ ಎಂಜಿನಿಯರಿಂಗ್‌ ಕೌಶಲದ ಪ್ರದರ್ಶನವೆಂದು ಹೇಳಲಾಗುವ ಈ ಸೇತುವೆಯು ನದಿಯ ನೀರಿನ ಮಟ್ಟದಿಂದ 359 ಮೀಟರ್‌ ಎತ್ತರವಿದೆ. 1.3 ಕಿ.ಮೀ. ಉದ್ದದ ಈ ಸೇತುವೆಯನ್ನು 2800 ಕೋಟಿ ರೂ. ವೆಚ್ಚದಲ್ಲಿ ಉತ್ತರ ರೈಲ್ವೆ ನಿರ್ಮಿಸಿದೆ. ಸೇತುವೆಯು ಎರಡು ಕಡೆಯಲ್ಲಿರುವ ಸಲಾಲ್‌ ಎ ಮತ್ತು ದುಗ್ಗಾ ರೈಲ್ವೆ ನಿಲ್ದಾಣಗಳ ನಡುವೆ ಸಂಪರ್ಕ ಕಲ್ಪಿಸಲಿದೆ. ಸೇತುವೆಯ ಮೇಲೆ ರೈಲ್ವೆ ಸಂಚಾರ ಇನ್ನಷ್ಟೇ ಆರಂಭವಾಗಬೇಕಿದೆ.

ಉಧಮ್‌ಪುರ, ಶ್ರೀನಗರ, ಬಾರಾಮುಲ್ಲಾ ರೇಲ್‌ ಲಿಂಕ್‌ ಯೋಜನೆಯ ಅಂಗವಾಗಿ ಈ ಸೇತುವೆ ನಿರ್ಮಾಣಗೊಂಡಿದೆ. ಹಿಮಾಲಯದಲ್ಲಿ ಭಾರಿ ಪ್ರಮಾಣದ ಕಲ್ಲು ಬಂಡೆಗಳು ಹಾಗೂ ಮಣ್ಣನ್ನು ಅಗೆದು ರೇಲ್‌ ಲಿಂಕ್‌ ಯೋಜನೆ ಕೈಗೊಳ್ಳಲಾಗಿದೆ. ಆಫ್ಕಾನ್ಸ್‌ ಎಂಬ ನಿರ್ಮಾಣ ಕಂಪನಿ ಸೇತುವೆಯ ನಿರ್ಮಾಣದ ಗುತ್ತಿಗೆ ಪಡೆದಿತ್ತು. ತೀವ್ರತರ ಭೂಕಂಪನ ಹಾಗೂ ಹವಾಮಾನ ವೈಪರೀತ್ಯಗಳನ್ನೂ ತಡೆದುಕೊಳ್ಳುವ ಸಾಮರ್ಥ್ಯ ಈ ಸೇತುವೆಗಿದೆ ಎಂದು ನಿರ್ಮಾಣ ಕಂಪನಿಯ ಎಂಜಿನಿಯರ್‌ಗಳು ಹೇಳಿಕೊಂಡಿದ್ದಾರೆ.

ಗೋಲ್ಡನ್ ಜಾಯಿಂಟ್ ಕಾಮಗಾರಿ ಪೂರ್ಣಗೊಂಡಿದ್ದು, ಈಗ ಸೇತುವೆಯ ಮೇಲೆ ಟ್ರ್ಯಾಕ್‌ಗಳನ್ನು ಹಾಕಲು ಎಂಜಿನಿಯರ್‌ಗಳಿಗೆ ದಾರಿ ಮಾಡಿಕೊಡಲಿದೆ. ಅದರ ಮೇಲಿನ ಟ್ರ್ಯಾಕ್‌ಗಳೊಂದಿಗೆ, ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಕಾಶ್ಮೀರವನ್ನು ರೈಲು ಜಾಲದ ಮೂಲಕ ಭಾರತದ ಉಳಿದ ಭಾಗಗಳೊಂದಿಗೆ ಸಂಪರ್ಕಿಸಲಾಗುತ್ತದೆ. ಈ ಸಂಬಂಧ ಹರ್ಷ ವ್ಯಕ್ತಪಡಿಸಿದ ಯುಎಸ್‌ಬಿಆರ್‌ಎಲ್ ಕೊಂಕಣ ರೈಲ್ವೇಸ್‌ನ ಮುಖ್ಯ ಆಡಳಿತಾಧಿಕಾರಿ ಸುರೇಂದರ್ ಮಾಹಿ, “ಇದು ನಮಗೆಲ್ಲರಿಗೂ ಬಹಳ ದೊಡ್ಡ ಯೋಜನೆಯಾಗಿದೆ. ಇಲ್ಲಿಗೆ ತಲುಪಲು ನಾವು ಸೇತುವೆಗಳು ಮತ್ತು ಸುರಂಗಗಳನ್ನು ಹೊಂದಿರುವ 26 ಕಿಮೀ ಅಪ್ರೋಚ್ ರಸ್ತೆಗಳನ್ನು ನಿರ್ಮಿಸಬೇಕಾಗಿತ್ತು. ಎಂಜಿನಿಯರ್‌ಗಳು ಹಲವಾರು ಸವಾಲುಗಳನ್ನು ಎದುರಿಸಿದರು. ಆದರೆ ಅಂತಿಮವಾಗಿ ಭಾರತದ ಜನರಿಗೆ ಎಂಜಿನಿಯರಿಂಗ್ ಅದ್ಭುತವನ್ನು ಉಡುಗೊರೆಯಾಗಿ ನೀಡಿದರು ಎಂದು ಹೇಳಿದರು.

andolana

Recent Posts

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…

9 seconds ago

ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್‌ ಮತ್ತು ಅಜೀವಿಕಾ…

29 mins ago

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…

42 mins ago

ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…

2 hours ago

ಕಳ್ಳತನ ಪ್ರಕರಣ: ಸ್ಯಾಂಡಲ್‌ವುಡ್‌ ನಿರ್ಮಾಪಕ ಹರ್ಷವರ್ಧನ್‌ ಅರೆಸ್ಟ್‌

ಕಾರವಾರ: ಪತ್ನಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್‌ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…

3 hours ago

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…

3 hours ago