ದೇಶ- ವಿದೇಶ

ಜಮ್ಮು ಕಾಶ್ಮೀರ : ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಲೋಕಾರ್ಪಣೆಗೆ ಸಿದ್ದ

ಜಮ್ಮು ಕಾಶ್ಮೀರ:  ಜಮ್ಮು ಕಾಶ್ಮೀರದ ಚೀನಾಬ್‌ ನದಿಯ ಮೇಲೆ ನಿರ್ಮಾಣವಾಗುತ್ತಿದ್ದ ಜಗತ್ತಿನ ಅತಿ ಎತ್ತರದ ರೈಲ್ವೆ ಸೇತುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಶುಭ ಗಳಿಗೆಯಲ್ಲಿ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಅದರೊಂದಿಗೆ, ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿ ಶ್ರೀನಗರಕ್ಕೆ ದೇಶದ ಇನ್ನಿತರ ಭಾಗದಿಂದ ರೈಲ್ವೆ ಸಂಪರ್ಕ ಕಲ್ಪಿಸುವ ಸನ್ನಿವೇಶ ಸನ್ನಿಹಿತವಾಗಿದೆ. ಹೀಗಾಗಿಯೇ ಇದು ದೇಶವನ್ನು ಜೋಡಿಸುವ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರೈಲ್ವೆ ಸೇತುವೆ ಎರಡು ಭಾಗಗಳು ಮಧ್ಯಭಾಗದಲ್ಲಿ ಸೇರುವ ಗೋಲ್ಡನ್‌ ಜಾಯಿಂಟ್‌ ಕಾಮಗಾರಿಯನ್ನು ಶನಿವಾರ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಇದರೊಂದಿಗೆ ಯೋಜನೆಯ ಶೇ. 98ರಷ್ಟು ಕಾಮಗಾರಿ ಪೂರ್ಣಗೊಂಡಂತೆ ಆಗಿದೆ. ಉಗ್ರರ ಸ್ಫೋಟದ ತೀವ್ರತೆಯನ್ನೂ ತಡೆದುಕೊಳ್ಳುವ ಶಕ್ತಿ ಹೊಂದಿರುವ ಈ ಕಬ್ಬಿಣದ ಸೇತುವೆ ಫ್ರಾನ್ಸ್‌ನ ಐಫೆಲ್‌ ಟವರ್‌ಗಿಂತ 35 ಮೀಟರ್‌ ಹೆಚ್ಚು ಎತ್ತರವಿದೆ. ಈವರೆಗೆ ಜಗತ್ತಿನ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆ ಗಳಿಸಿದ್ದ ಚೀನಾದ ಬೇಪಾನ್‌ಜಿಯಾಂಗ್‌ ನದಿಯ ಮೇಲಿನ ಉಕ್ಕಿನ ಸೇತುವೆಯನ್ನು (275 ಮೀಟರ್‌ ಎತ್ತರ) ಇದು ಹಿಂದಿಕ್ಕಿ ನಂ.1 ಎತ್ತರದ ಸೇತುವೆ ಎಂಬ ಹಿರಿಮೆಗೆ ಪಾತ್ರವಾಗಿದೆ.

ಸ್ವತಂತ್ರ ಭಾರತದ ಇತಿಹಾಸದಲ್ಲೇ ಅತ್ಯದ್ಭುತ ಎಂಜಿನಿಯರಿಂಗ್‌ ಕೌಶಲದ ಪ್ರದರ್ಶನವೆಂದು ಹೇಳಲಾಗುವ ಈ ಸೇತುವೆಯು ನದಿಯ ನೀರಿನ ಮಟ್ಟದಿಂದ 359 ಮೀಟರ್‌ ಎತ್ತರವಿದೆ. 1.3 ಕಿ.ಮೀ. ಉದ್ದದ ಈ ಸೇತುವೆಯನ್ನು 2800 ಕೋಟಿ ರೂ. ವೆಚ್ಚದಲ್ಲಿ ಉತ್ತರ ರೈಲ್ವೆ ನಿರ್ಮಿಸಿದೆ. ಸೇತುವೆಯು ಎರಡು ಕಡೆಯಲ್ಲಿರುವ ಸಲಾಲ್‌ ಎ ಮತ್ತು ದುಗ್ಗಾ ರೈಲ್ವೆ ನಿಲ್ದಾಣಗಳ ನಡುವೆ ಸಂಪರ್ಕ ಕಲ್ಪಿಸಲಿದೆ. ಸೇತುವೆಯ ಮೇಲೆ ರೈಲ್ವೆ ಸಂಚಾರ ಇನ್ನಷ್ಟೇ ಆರಂಭವಾಗಬೇಕಿದೆ.

ಉಧಮ್‌ಪುರ, ಶ್ರೀನಗರ, ಬಾರಾಮುಲ್ಲಾ ರೇಲ್‌ ಲಿಂಕ್‌ ಯೋಜನೆಯ ಅಂಗವಾಗಿ ಈ ಸೇತುವೆ ನಿರ್ಮಾಣಗೊಂಡಿದೆ. ಹಿಮಾಲಯದಲ್ಲಿ ಭಾರಿ ಪ್ರಮಾಣದ ಕಲ್ಲು ಬಂಡೆಗಳು ಹಾಗೂ ಮಣ್ಣನ್ನು ಅಗೆದು ರೇಲ್‌ ಲಿಂಕ್‌ ಯೋಜನೆ ಕೈಗೊಳ್ಳಲಾಗಿದೆ. ಆಫ್ಕಾನ್ಸ್‌ ಎಂಬ ನಿರ್ಮಾಣ ಕಂಪನಿ ಸೇತುವೆಯ ನಿರ್ಮಾಣದ ಗುತ್ತಿಗೆ ಪಡೆದಿತ್ತು. ತೀವ್ರತರ ಭೂಕಂಪನ ಹಾಗೂ ಹವಾಮಾನ ವೈಪರೀತ್ಯಗಳನ್ನೂ ತಡೆದುಕೊಳ್ಳುವ ಸಾಮರ್ಥ್ಯ ಈ ಸೇತುವೆಗಿದೆ ಎಂದು ನಿರ್ಮಾಣ ಕಂಪನಿಯ ಎಂಜಿನಿಯರ್‌ಗಳು ಹೇಳಿಕೊಂಡಿದ್ದಾರೆ.

ಗೋಲ್ಡನ್ ಜಾಯಿಂಟ್ ಕಾಮಗಾರಿ ಪೂರ್ಣಗೊಂಡಿದ್ದು, ಈಗ ಸೇತುವೆಯ ಮೇಲೆ ಟ್ರ್ಯಾಕ್‌ಗಳನ್ನು ಹಾಕಲು ಎಂಜಿನಿಯರ್‌ಗಳಿಗೆ ದಾರಿ ಮಾಡಿಕೊಡಲಿದೆ. ಅದರ ಮೇಲಿನ ಟ್ರ್ಯಾಕ್‌ಗಳೊಂದಿಗೆ, ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಕಾಶ್ಮೀರವನ್ನು ರೈಲು ಜಾಲದ ಮೂಲಕ ಭಾರತದ ಉಳಿದ ಭಾಗಗಳೊಂದಿಗೆ ಸಂಪರ್ಕಿಸಲಾಗುತ್ತದೆ. ಈ ಸಂಬಂಧ ಹರ್ಷ ವ್ಯಕ್ತಪಡಿಸಿದ ಯುಎಸ್‌ಬಿಆರ್‌ಎಲ್ ಕೊಂಕಣ ರೈಲ್ವೇಸ್‌ನ ಮುಖ್ಯ ಆಡಳಿತಾಧಿಕಾರಿ ಸುರೇಂದರ್ ಮಾಹಿ, “ಇದು ನಮಗೆಲ್ಲರಿಗೂ ಬಹಳ ದೊಡ್ಡ ಯೋಜನೆಯಾಗಿದೆ. ಇಲ್ಲಿಗೆ ತಲುಪಲು ನಾವು ಸೇತುವೆಗಳು ಮತ್ತು ಸುರಂಗಗಳನ್ನು ಹೊಂದಿರುವ 26 ಕಿಮೀ ಅಪ್ರೋಚ್ ರಸ್ತೆಗಳನ್ನು ನಿರ್ಮಿಸಬೇಕಾಗಿತ್ತು. ಎಂಜಿನಿಯರ್‌ಗಳು ಹಲವಾರು ಸವಾಲುಗಳನ್ನು ಎದುರಿಸಿದರು. ಆದರೆ ಅಂತಿಮವಾಗಿ ಭಾರತದ ಜನರಿಗೆ ಎಂಜಿನಿಯರಿಂಗ್ ಅದ್ಭುತವನ್ನು ಉಡುಗೊರೆಯಾಗಿ ನೀಡಿದರು ಎಂದು ಹೇಳಿದರು.

andolana

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

2 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

2 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

2 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

2 hours ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

10 hours ago