ದೇಶ- ವಿದೇಶ

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಒತ್ತಾಯಿಸಿದ್ದಾರೆ.

ಭಾರತದಲ್ಲಿ ದಿನಸಿ ಪದಾರ್ಥಗಳು ೧೫ ನಿಮಿಷಗಳಲ್ಲಿ ಮನೆ ಬಾಗಿಲಿಗೆ ತಲುಪುತ್ತವೆ. ಆದರೆ, ರೋಗಿಗಳು ಆಸ್ಪತ್ರೆಗೆ ತಲುಪಲು ಆಗುತ್ತಿರುವ ವಿಳಂಬದಿಂದ ಸಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ರಾಜ್ಯಸಭೆಯ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಆಸ್ಪತ್ರೆಗೆ ತಲುಪುವುದರಲ್ಲಿ ಆಗುತ್ತಿರುವ ವಿಳಂಬದಿಂದ ರೋಗಿಗಳು ಮೃತಪಡುತ್ತಿರುವ ಬಗ್ಗೆ ಸಂಸತ್ತಿನ ಆರೋಗ್ಯ ಸ್ಥಾಯಿ ಸಮಿತಿಯು ಗಮನಹರಿಸಬೇಕು ಎಂದಿದ್ದಾರೆ. ದೇಶದಲ್ಲಿ, ಆಂಬ್ಯುಲೆನ್ಸ್‌ಗಳು ಟ್ರಾಫಿಕ್‌ನಲ್ಲಿ ಸಿಲುಕಿಕೊಳ್ಳುವುದರಿಂದ ರೋಗಿಗಳು ಸಾಯುತ್ತಿದ್ದಾರೆ. ೨೦೧೮ರ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹೊರತಾಗಿಯೂ ನಮ್ಮಲ್ಲಿ ಆಂಬ್ಯುಲೆನ್ಸ್‌ಗಳಿಗಾಗಿ ವಿಶೇಷ ತುರ್ತು ಮಾರ್ಗಗಳಿಲ್ಲ. ಈ ದುರಂತಗಳನ್ನು ಯಾವುದೇ ರಾಷ್ಟ್ರೀಯ ದತ್ತಾಂಶಗಳು ಪತ್ತೆ ಹಚ್ಚುವುದಿಲ್ಲ ಎಂದು ಜಯಾ ಹೇಳಿದ್ದಾರೆ.

ರಾಷ್ಟ್ರವ್ಯಾಪಿ ಎಐ ಟ್ರಾಫಿಕ್ ಸಿಗ್ನಲ್‌ಗಳೊಂದಿಗೆ ಆಂಬ್ಯುಲೆನ್ಸ್‌ಗೆ ಮೀಸಲಾದ ತುರ್ತು ಮಾರ್ಗಗಳನ್ನು ಪ್ರತಿಪಾದಿಸಿದ ಅವರು, ಆಂಬುಲೆನ್ಸ್‌ಗಳಿಗೆ ಆದ್ಯತೆ ನೀಡಬೇಕು, ೩೦ ಸೆಕೆಂಡ್ ಹಸಿರು ಕಾರಿಡಾರ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಮೂಲಕ ಸುಪ್ರೀಂ ಕೋರ್ಟ್‌ನ ೨೦೧೮ರ ಆಂಬುಲೆನ್ಸ್ ಕಾರಿಡಾರ್ ನಿರ್ದೇಶನವನ್ನು ಜಾರಿಗೊಳಿಸುವುದು, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದು ಮತ್ತು ಆಂಬ್ಯುಲೆನ್ಸ್ ವಿಳಂಬದಿಂದ ಆಗುವ ಸಾವುಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

32 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago