ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಒತ್ತಾಯಿಸಿದ್ದಾರೆ.
ಭಾರತದಲ್ಲಿ ದಿನಸಿ ಪದಾರ್ಥಗಳು ೧೫ ನಿಮಿಷಗಳಲ್ಲಿ ಮನೆ ಬಾಗಿಲಿಗೆ ತಲುಪುತ್ತವೆ. ಆದರೆ, ರೋಗಿಗಳು ಆಸ್ಪತ್ರೆಗೆ ತಲುಪಲು ಆಗುತ್ತಿರುವ ವಿಳಂಬದಿಂದ ಸಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು
ರಾಜ್ಯಸಭೆಯ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಆಸ್ಪತ್ರೆಗೆ ತಲುಪುವುದರಲ್ಲಿ ಆಗುತ್ತಿರುವ ವಿಳಂಬದಿಂದ ರೋಗಿಗಳು ಮೃತಪಡುತ್ತಿರುವ ಬಗ್ಗೆ ಸಂಸತ್ತಿನ ಆರೋಗ್ಯ ಸ್ಥಾಯಿ ಸಮಿತಿಯು ಗಮನಹರಿಸಬೇಕು ಎಂದಿದ್ದಾರೆ. ದೇಶದಲ್ಲಿ, ಆಂಬ್ಯುಲೆನ್ಸ್ಗಳು ಟ್ರಾಫಿಕ್ನಲ್ಲಿ ಸಿಲುಕಿಕೊಳ್ಳುವುದರಿಂದ ರೋಗಿಗಳು ಸಾಯುತ್ತಿದ್ದಾರೆ. ೨೦೧೮ರ ಸುಪ್ರೀಂ ಕೋರ್ಟ್ನ ನಿರ್ದೇಶನದ ಹೊರತಾಗಿಯೂ ನಮ್ಮಲ್ಲಿ ಆಂಬ್ಯುಲೆನ್ಸ್ಗಳಿಗಾಗಿ ವಿಶೇಷ ತುರ್ತು ಮಾರ್ಗಗಳಿಲ್ಲ. ಈ ದುರಂತಗಳನ್ನು ಯಾವುದೇ ರಾಷ್ಟ್ರೀಯ ದತ್ತಾಂಶಗಳು ಪತ್ತೆ ಹಚ್ಚುವುದಿಲ್ಲ ಎಂದು ಜಯಾ ಹೇಳಿದ್ದಾರೆ.
ರಾಷ್ಟ್ರವ್ಯಾಪಿ ಎಐ ಟ್ರಾಫಿಕ್ ಸಿಗ್ನಲ್ಗಳೊಂದಿಗೆ ಆಂಬ್ಯುಲೆನ್ಸ್ಗೆ ಮೀಸಲಾದ ತುರ್ತು ಮಾರ್ಗಗಳನ್ನು ಪ್ರತಿಪಾದಿಸಿದ ಅವರು, ಆಂಬುಲೆನ್ಸ್ಗಳಿಗೆ ಆದ್ಯತೆ ನೀಡಬೇಕು, ೩೦ ಸೆಕೆಂಡ್ ಹಸಿರು ಕಾರಿಡಾರ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಮೂಲಕ ಸುಪ್ರೀಂ ಕೋರ್ಟ್ನ ೨೦೧೮ರ ಆಂಬುಲೆನ್ಸ್ ಕಾರಿಡಾರ್ ನಿರ್ದೇಶನವನ್ನು ಜಾರಿಗೊಳಿಸುವುದು, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದು ಮತ್ತು ಆಂಬ್ಯುಲೆನ್ಸ್ ವಿಳಂಬದಿಂದ ಆಗುವ ಸಾವುಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…