ಬಿಹಾರ/ಪಾಟ್ನಾ: ಜೆಡಿಯು (ಜನತಾ ದಳ ಯುನೈಟೆಡ್) ಯುವ ಮುಖಂಡ ಸೌರಭ್ ಕುಮಾರ್ನನ್ನು ಬುಧವಾರ (ಏ.24) ತಡರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಬಿಹಾರ ರಾಜಧಾನಿ ಪಾಟ್ನಾದ ಪನ್ಪುನ್ನಲ್ಲಿ ತಡ ರಾತ್ರಿ 33 ವರ್ಷದ ಸೌರಭ್ ಕುಮಾರ್ ಮೇಲೆ ದಾಳಿ ಕೋರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ತಡರಾತ್ರಿ ಸೌರಭ್ ಕುಮಾರ್ ಪರ್ಸಾ ಬಜಾರ್ ಗ್ರಾಮದಲ್ಲಿ ಸ್ನೇಹಿತ ಮದುವೆ ಸಮಾರಂಭದಿಂದ ವಾಪಾಸುಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ನಾಲ್ವರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ಸೌರಭ್ ಅವರ ತಲೆ ಭಾಗಕ್ಕೆ ಬಡಿದಿದ್ದು ಮರಣ ಹೊಂದಿದ್ದಾರೆ ಹಾಗೂ ಇವರ ಜೊತೆಯಲ್ಲಿದ್ದ ಸ್ನೇಹಿತ ಮುನ್ಮನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸೌರಭ್ ಕುಮಾರ್ ಅವರ ಮೇಲೆ ನಡೆದ ದಾಳಿಯ ಸಿಸಿ ಟಿವಿ ದೃಶ್ಯಗಳನ್ನಾಧರಿಸಿ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…