ನವದೆಹಲಿ: ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಅವರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಸೊರೆನ್ ಈಗ ಸ್ಪಷ್ಟನೆ ನೀಡಿದ್ದು, ಹೊಸ ರಾಜಕೀಯ ಪಕ್ಷ ಆರಂಭಿಸುವ ಸುಳಿವು ನೀಡಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯದಿಂದ ನಿವೃತ್ತಿ ಹೊಂದುವುದು, ಹೊಸ ಪಕ್ಷವನ್ನು ಆರಂಭಿಸುವುದು ಅಥವಾ ಇನ್ನೊಂದು ಪಕ್ಷವನ್ನು ಸೇರುವುದು ನನ್ನ ಮುಂದಿರುವ ಆಯ್ಕೆಗಳು. ಸದ್ಯಕ್ಕೆ ನಿವೃತ್ತಿಯಾಗುವುದಿಲ್ಲ. ಹೀಗಾಗಿ ನನ್ನ ಮುಂದೆ ಇನ್ನೆರಡು ಆಯ್ಕೆಗಳಿವೆ. ನಾನೇಕೆ ನನ್ನ ಸ್ವಂತ ಪಕ್ಷವನ್ನು ರಚಿಸಬಾರದು ಎಂದು ಪ್ರಶ್ನಿಸಿದರು. ನನ್ನ ಮುಂದಿನ ನಡೆ ಒಂದು ವಾರದಲ್ಲಿ ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಆಗಸ್ಟ್.18ರಂದು ಅವರು ಕೆಲವು ಶಾಸಕರೊಂದಿಗೆ ದೆಹಲಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಯಾಗಬಹುದು ಎಂದು ಊಹಿಸಲಾಗಿತ್ತು. ಆಪಾದಿತ ಭೂ ಹಗರಣ ಪ್ರಕರಣದಲ್ಲಿ ಜನವರಿ.31ರಂದು ಇ.ಡಿ ಹೇಮಂತ್ ಸೋರೆನ್ ಅವರನ್ನು ಬಂಧಿಸಿದ ನಂತರ 67 ವರ್ಷದ ಚಂಪೈ ಸೊರೆನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾದರು.
ಹೇಮಂತ್ ಸೊರೆನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜುಲೈ.3ರಂದು ಅವರು ಹುದ್ದೆಯಿಂದ ಕೆಳಗಿಳಿದರು. ಈಗ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ್ದು, ಅವರ ಮುಂದಿನ ನಡೆ ಹೇಗಿರಲಿದೆ ಎಂಬುದೇ ಭಾರೀ ಕುತೂಹಲಕಾರಿಯಾಗಿದೆ.
ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…
ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…
ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್ ಸೀಜ್ ಮಾಡಲಾಗಿದೆ. ಎನ್ಸಿಬಿ ಅಧಿಕಾರಿಗಳು…