ನವದೆಹಲಿ: ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಅವರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಸೊರೆನ್ ಈಗ ಸ್ಪಷ್ಟನೆ ನೀಡಿದ್ದು, ಹೊಸ ರಾಜಕೀಯ ಪಕ್ಷ ಆರಂಭಿಸುವ ಸುಳಿವು ನೀಡಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯದಿಂದ ನಿವೃತ್ತಿ ಹೊಂದುವುದು, ಹೊಸ ಪಕ್ಷವನ್ನು ಆರಂಭಿಸುವುದು ಅಥವಾ ಇನ್ನೊಂದು ಪಕ್ಷವನ್ನು ಸೇರುವುದು ನನ್ನ ಮುಂದಿರುವ ಆಯ್ಕೆಗಳು. ಸದ್ಯಕ್ಕೆ ನಿವೃತ್ತಿಯಾಗುವುದಿಲ್ಲ. ಹೀಗಾಗಿ ನನ್ನ ಮುಂದೆ ಇನ್ನೆರಡು ಆಯ್ಕೆಗಳಿವೆ. ನಾನೇಕೆ ನನ್ನ ಸ್ವಂತ ಪಕ್ಷವನ್ನು ರಚಿಸಬಾರದು ಎಂದು ಪ್ರಶ್ನಿಸಿದರು. ನನ್ನ ಮುಂದಿನ ನಡೆ ಒಂದು ವಾರದಲ್ಲಿ ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಆಗಸ್ಟ್.18ರಂದು ಅವರು ಕೆಲವು ಶಾಸಕರೊಂದಿಗೆ ದೆಹಲಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಯಾಗಬಹುದು ಎಂದು ಊಹಿಸಲಾಗಿತ್ತು. ಆಪಾದಿತ ಭೂ ಹಗರಣ ಪ್ರಕರಣದಲ್ಲಿ ಜನವರಿ.31ರಂದು ಇ.ಡಿ ಹೇಮಂತ್ ಸೋರೆನ್ ಅವರನ್ನು ಬಂಧಿಸಿದ ನಂತರ 67 ವರ್ಷದ ಚಂಪೈ ಸೊರೆನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾದರು.
ಹೇಮಂತ್ ಸೊರೆನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜುಲೈ.3ರಂದು ಅವರು ಹುದ್ದೆಯಿಂದ ಕೆಳಗಿಳಿದರು. ಈಗ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ್ದು, ಅವರ ಮುಂದಿನ ನಡೆ ಹೇಗಿರಲಿದೆ ಎಂಬುದೇ ಭಾರೀ ಕುತೂಹಲಕಾರಿಯಾಗಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…