ನವದೆಹಲಿ: ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಅವರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಸೊರೆನ್ ಈಗ ಸ್ಪಷ್ಟನೆ ನೀಡಿದ್ದು, ಹೊಸ ರಾಜಕೀಯ ಪಕ್ಷ ಆರಂಭಿಸುವ ಸುಳಿವು ನೀಡಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯದಿಂದ ನಿವೃತ್ತಿ ಹೊಂದುವುದು, ಹೊಸ ಪಕ್ಷವನ್ನು ಆರಂಭಿಸುವುದು ಅಥವಾ ಇನ್ನೊಂದು ಪಕ್ಷವನ್ನು ಸೇರುವುದು ನನ್ನ ಮುಂದಿರುವ ಆಯ್ಕೆಗಳು. ಸದ್ಯಕ್ಕೆ ನಿವೃತ್ತಿಯಾಗುವುದಿಲ್ಲ. ಹೀಗಾಗಿ ನನ್ನ ಮುಂದೆ ಇನ್ನೆರಡು ಆಯ್ಕೆಗಳಿವೆ. ನಾನೇಕೆ ನನ್ನ ಸ್ವಂತ ಪಕ್ಷವನ್ನು ರಚಿಸಬಾರದು ಎಂದು ಪ್ರಶ್ನಿಸಿದರು. ನನ್ನ ಮುಂದಿನ ನಡೆ ಒಂದು ವಾರದಲ್ಲಿ ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಆಗಸ್ಟ್.18ರಂದು ಅವರು ಕೆಲವು ಶಾಸಕರೊಂದಿಗೆ ದೆಹಲಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಯಾಗಬಹುದು ಎಂದು ಊಹಿಸಲಾಗಿತ್ತು. ಆಪಾದಿತ ಭೂ ಹಗರಣ ಪ್ರಕರಣದಲ್ಲಿ ಜನವರಿ.31ರಂದು ಇ.ಡಿ ಹೇಮಂತ್ ಸೋರೆನ್ ಅವರನ್ನು ಬಂಧಿಸಿದ ನಂತರ 67 ವರ್ಷದ ಚಂಪೈ ಸೊರೆನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾದರು.
ಹೇಮಂತ್ ಸೊರೆನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜುಲೈ.3ರಂದು ಅವರು ಹುದ್ದೆಯಿಂದ ಕೆಳಗಿಳಿದರು. ಈಗ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ್ದು, ಅವರ ಮುಂದಿನ ನಡೆ ಹೇಗಿರಲಿದೆ ಎಂಬುದೇ ಭಾರೀ ಕುತೂಹಲಕಾರಿಯಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…