ದೇಶ- ವಿದೇಶ

ಜಿನ್ನಾ,ಕಾಂಗ್ರೆಸ್‌, ಮೌಂಟ್‌ ಬ್ಯಾಟರ್‌ ದೇಶ ವಿಭಜನೆಗೆ ಕಾರಣ : NCERT ಪಠ್ಯದಲ್ಲಿ ಉಲ್ಲೇಖ

ಹೊಸದಿಲ್ಲಿ : ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನು ಗುರುತಿಸಲು, NCERT ಶಾಲೆಗಳಿಗೆ ವಿಶೇಷ ಶೈಕ್ಷಣಿಕ ಪಠ್ಯವನ್ನು ಅನ್ನು ಪರಿಚಯಿಸಿದ್ದು, ದೇಶ ವಿಭಜನೆಗೆ ಮೊಹಮ್ಮದ್‌ ಅಲಿ ಜಿನ್ನಾ, ಕಾಂಗ್ರೆಸ್‌ ಮತ್ತು ಅಂದಿನ ವೈಸ್‌ರಾಯ್‌ ಮೌಂಟ್‌ ಬ್ಯಾಟನ್‌ ಕಾರಣ ಎಂದು ಪಠ್ಯದಲ್ಲಿ ವಿವರಿಸಿದೆ.

ವಿಭಜನೆಯ ಬಳಿಕ ಕಾಶ್ಮೀರ ವಿವಾದ ಶುರುವಾಯಿತು. ಇದು ಇಂದಿಗೂ ದೇಶದ ವಿದೇಶಾಂಗ ನೀತಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಕಾಶ್ಮೀರ ವಿವಾದವನ್ನು ಮುಂದೆ ಇಟ್ಟುಕೊಂಡು ಈಗಲೂ ಕೆಲ ರಾಷ್ಟ್ರಗಳು ಪಾಕಿಸ್ತಾನಕ್ಕೆ ನೆರವು ನೀಡುತ್ತಿವೆ ಎಂದು ವಿವರಿಸಿದೆ.

“ಆಗಸ್ಟ್ 15, 1947 ರಂದು, ಭಾರತ ವಿಭಜನೆಯಾಯಿತು. ಆದರೆ ಇದು ಯಾವುದೇ ಒಬ್ಬ ವ್ಯಕ್ತಿಯ ಕೃತ್ಯವಲ್ಲ. ಭಾರತದ ವಿಭಜನೆಗೆ ಕಾರಣವಾದ ಮೂರು ಅಂಶಗಳಿದ್ದವು: ಅದನ್ನು ಒತ್ತಾಯಿಸಿದ ಜಿನ್ನಾ; ಎರಡನೆಯದಾಗಿ ಅದನ್ನು ಒಪ್ಪಿಕೊಂಡ ಕಾಂಗ್ರೆಸ್ ಮತ್ತು ಮೂರನೆಯದಾಗಿ, ಅದನ್ನು ಜಾರಿಗೆ ತಂದ ಮೌಂಟ್ ಬ್ಯಾಟನ್,” ಎಂದು NCERT ಪಠ್ಯದಲ್ಲಿ ಉಲ್ಲೇಖಿಸಲಾಗಿದೆ.

ವಿಭಜನೆಯ ದೀರ್ಘಕಾಲೀನ ಪರಿಣಾಮವನ್ನು ಪಠ್ಯದಲ್ಲಿ ಎತ್ತಿ ತೋರಿಸಲಾಗಿದೆ. ವಿಭಜನೆ ವೇಳೆ ದೇಶದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಭಾರತ ನಿಜಕ್ಕೂ ಯುದ್ಧ ಭೂಮಿಯಾಗಿತ್ತು. ಗಾಂಧಿ ಅವರು ವಿಭಜನೆಯನ್ನು ವಿರೋಧಿಸಿದ್ದರು, ಹಿಂಸಾಚಾರದ ಮೂಲಕ ಕಾಂಗ್ರೆಸ್‌ ನಿರ್ಧಾರವನ್ನು ವಿರೋಧಿಸುವಲ್ಲಿ ಅವರು ವಿಫಲರಾದರೂ ಎಂದು ಹೇಳಲಾಗಿದೆ.

6–8 ತರಗತಿಗಳು ಮತ್ತು 9–12 ತರಗತಿಗಳಿಗೆ ಪ್ರತ್ಯೇಕ ಪಠ್ಯಗಳನ್ನು ಎನ್‌ಸಿಇಆರ್‌ಟಿ ಸಿದ್ಧಪಡಿಸಿದೆ. ದೇಶ ವಿಭಜನಗೆಯ ಕರಾಳ ನೆನಪಿನ ದಿನದ ಅಂಗವಾಗಿ 2021ರಲ್ಲಿ ಪ್ರಧಾನಿ ಮೋದಿ ಅವರ ಸಂದೇಶದೊಂದಿಗೆ ಈ ಎರಡು ಪುಸ್ತಕಗಳು ಆರಂಭಗೊಳ್ಳುತ್ತವೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

9 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

10 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

11 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 hours ago