ಹೊಸದಿಲ್ಲಿ : ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನು ಗುರುತಿಸಲು, NCERT ಶಾಲೆಗಳಿಗೆ ವಿಶೇಷ ಶೈಕ್ಷಣಿಕ ಪಠ್ಯವನ್ನು ಅನ್ನು ಪರಿಚಯಿಸಿದ್ದು, ದೇಶ ವಿಭಜನೆಗೆ ಮೊಹಮ್ಮದ್ ಅಲಿ ಜಿನ್ನಾ, ಕಾಂಗ್ರೆಸ್ ಮತ್ತು ಅಂದಿನ ವೈಸ್ರಾಯ್ ಮೌಂಟ್ ಬ್ಯಾಟನ್ ಕಾರಣ ಎಂದು ಪಠ್ಯದಲ್ಲಿ ವಿವರಿಸಿದೆ.
ವಿಭಜನೆಯ ಬಳಿಕ ಕಾಶ್ಮೀರ ವಿವಾದ ಶುರುವಾಯಿತು. ಇದು ಇಂದಿಗೂ ದೇಶದ ವಿದೇಶಾಂಗ ನೀತಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಕಾಶ್ಮೀರ ವಿವಾದವನ್ನು ಮುಂದೆ ಇಟ್ಟುಕೊಂಡು ಈಗಲೂ ಕೆಲ ರಾಷ್ಟ್ರಗಳು ಪಾಕಿಸ್ತಾನಕ್ಕೆ ನೆರವು ನೀಡುತ್ತಿವೆ ಎಂದು ವಿವರಿಸಿದೆ.
“ಆಗಸ್ಟ್ 15, 1947 ರಂದು, ಭಾರತ ವಿಭಜನೆಯಾಯಿತು. ಆದರೆ ಇದು ಯಾವುದೇ ಒಬ್ಬ ವ್ಯಕ್ತಿಯ ಕೃತ್ಯವಲ್ಲ. ಭಾರತದ ವಿಭಜನೆಗೆ ಕಾರಣವಾದ ಮೂರು ಅಂಶಗಳಿದ್ದವು: ಅದನ್ನು ಒತ್ತಾಯಿಸಿದ ಜಿನ್ನಾ; ಎರಡನೆಯದಾಗಿ ಅದನ್ನು ಒಪ್ಪಿಕೊಂಡ ಕಾಂಗ್ರೆಸ್ ಮತ್ತು ಮೂರನೆಯದಾಗಿ, ಅದನ್ನು ಜಾರಿಗೆ ತಂದ ಮೌಂಟ್ ಬ್ಯಾಟನ್,” ಎಂದು NCERT ಪಠ್ಯದಲ್ಲಿ ಉಲ್ಲೇಖಿಸಲಾಗಿದೆ.
ವಿಭಜನೆಯ ದೀರ್ಘಕಾಲೀನ ಪರಿಣಾಮವನ್ನು ಪಠ್ಯದಲ್ಲಿ ಎತ್ತಿ ತೋರಿಸಲಾಗಿದೆ. ವಿಭಜನೆ ವೇಳೆ ದೇಶದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಭಾರತ ನಿಜಕ್ಕೂ ಯುದ್ಧ ಭೂಮಿಯಾಗಿತ್ತು. ಗಾಂಧಿ ಅವರು ವಿಭಜನೆಯನ್ನು ವಿರೋಧಿಸಿದ್ದರು, ಹಿಂಸಾಚಾರದ ಮೂಲಕ ಕಾಂಗ್ರೆಸ್ ನಿರ್ಧಾರವನ್ನು ವಿರೋಧಿಸುವಲ್ಲಿ ಅವರು ವಿಫಲರಾದರೂ ಎಂದು ಹೇಳಲಾಗಿದೆ.
6–8 ತರಗತಿಗಳು ಮತ್ತು 9–12 ತರಗತಿಗಳಿಗೆ ಪ್ರತ್ಯೇಕ ಪಠ್ಯಗಳನ್ನು ಎನ್ಸಿಇಆರ್ಟಿ ಸಿದ್ಧಪಡಿಸಿದೆ. ದೇಶ ವಿಭಜನಗೆಯ ಕರಾಳ ನೆನಪಿನ ದಿನದ ಅಂಗವಾಗಿ 2021ರಲ್ಲಿ ಪ್ರಧಾನಿ ಮೋದಿ ಅವರ ಸಂದೇಶದೊಂದಿಗೆ ಈ ಎರಡು ಪುಸ್ತಕಗಳು ಆರಂಭಗೊಳ್ಳುತ್ತವೆ.
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…