jiohotstar.com ಡೊಮೈನ್ ಉಚಿತವಾಗಿ ರಿಲಯನ್ಸ್‌ಗೆ ವರ್ಗ

ಹೊಸದಿಲ್ಲಿ: jiohotstar.com ಡೊಮೈನ್ ಅನ್ನು ದುಬೈನಲ್ಲಿರುವ ಭಾರತೀಯ ಮೂಲದ ಚಿಣ್ಣರು ರಿಲಯನ್ಸ್‌ಗೆ ಉಚಿತವಾಗಿ ವರ್ಗಾಯಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಜಿಯೊ ಸಿನಿಮಾ ಮತ್ತು ಡಿಸ್ನಿ+ಹಾಟ್‌ಸ್ಟಾರ್‌ ಒತ್ತೀಚೆಗೆ ಒಗ್ಗೂಡಿತ್ತು. ಬಳಿಕ ಜಿಯೊ ಒಡೆತನದ ರಿಲಯನ್ಸ್‌ಗೆ ಡೊಮೈನ್‌ ವಿಚಾರವಾಗಿ ಚಿಂತೆಯು ಇತ್ತು. ಇದಕ್ಕೆ ಕಾರಣ ಜಿಯೊ ಮತ್ತು ಡಿಸ್ನಿ+ ಎರಡು ಕಂಪನಿಯ ವಿಲೀನ ಪ್ರಕ್ರಿಯೆ ಮುನ್ನ ದೆಹಲಿ ಮೂಲದ ವಿದ್ಯಾರ್ಥಿಯೊಬ್ಬ jiohotstar.com ಡೊಮೈನ್‌ ಅನ್ನು ಖರೀದಿಸಿದ್ದ. ನಂತರ ಈತ ಉನ್ನತ ವ್ಯಾಸಂಗಕ್ಕೆ ಕೇಳಿದಷ್ಟು ಹಣ ನೀಡಿದರೆ ನಿಮಗೆ ವರ್ಗಾಯಿಸುತ್ತೇನೆ ಎಂದು ರಿಲಯನ್ಸ್‌ ಕಂಪನಿಗೆ ಹಣದ ಬೇಡಿಕೆ ಇಟ್ಟಿದ್ದ.

ಮುಂದಾಗುವ ಸಾವಲುಗಳನ್ನು ಚಿಂತಿಸಿದ ಜಿಯೊ ಕಂಪನಿಯ ಈತನ ಬೇಡಿಕೆಯನ್ನು ತಿರಸ್ಕರಿಸಿತ್ತು. ಆನಂತರ ಆ ವಿದ್ಯಾರ್ಥಿ ದುಬೈನಲ್ಲಿರುವ ಭಾರತ ಮೂಲದ ಜೈನಾಮ್‌ ಜೈನ್(‌13) ಜೈವಿಕಾ ಜೈನ್(10) ಎಂಬ ಚಿಣ್ಣರಿಗೆ jiohotstar.com ಡೊಮೈನ್‌ ಅನ್ನು ಮಾರಿದ್ದ.

ಇದೀಗ ಈ ಚಿಣ್ಣರು jiohotstar.com ಡೊಮೈನ್‌ ಅನ್ನು ರಿಲಯನ್ಸ್‌ ಕಂಪನಿಗೆ ಉಚಿತವಾಗಿ ನೀಡಲು ನಿರ್ಧರಿಸಿದ್ದಾರೆ. ಈ ಕುರಿತು ವಿಡಿಯೊ ಹಂಚಿಕೊಂಡಿರುವ ಅವರು, ರಿಲಯನ್ಸ್‌ ಐಪಿ ಲೀಗಲ್‌ ಟೀಮ್‌ ನಮ್ಮನ್ನು ಸಂಪರ್ಕಿಸಿದೆ. ಈ ಸಂಬಂಧ ಒಪ್ಪಂದಗಳಿಗೆ ಸಹಿಹಾಕಲು ಮುಂಬೈಗೆ ಬರಲಿದ್ದೇವೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ನಮ್ಮಿಂದ ಅವರಿಗೆ ಸಹಾಯವಾಗಲಿ ಎಂದಷ್ಟೇ ನಾವು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಈ ಇಬ್ಬರು ಚಿಣ್ಣರು ದುಬೈನಲ್ಲಿ ಶೈಕ್ಷಣಿಕ ಸಂಬಂಧ ಚಾರಿಟಿ ನಡೆಸುತ್ತಿದದ್ದು, ಸೇವಾ ಆರ್ಮಿ ಎಂಬ ವೆಬ್‌ಸೈಟ್‌ ಅನ್ನು ಸಹ ಇದಕ್ಕಾಗಿ ರೂಪಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

9 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

23 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

40 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

55 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago