jiohotstar.com ಡೊಮೈನ್ ಉಚಿತವಾಗಿ ರಿಲಯನ್ಸ್‌ಗೆ ವರ್ಗ

ಹೊಸದಿಲ್ಲಿ: jiohotstar.com ಡೊಮೈನ್ ಅನ್ನು ದುಬೈನಲ್ಲಿರುವ ಭಾರತೀಯ ಮೂಲದ ಚಿಣ್ಣರು ರಿಲಯನ್ಸ್‌ಗೆ ಉಚಿತವಾಗಿ ವರ್ಗಾಯಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಜಿಯೊ ಸಿನಿಮಾ ಮತ್ತು ಡಿಸ್ನಿ+ಹಾಟ್‌ಸ್ಟಾರ್‌ ಒತ್ತೀಚೆಗೆ ಒಗ್ಗೂಡಿತ್ತು. ಬಳಿಕ ಜಿಯೊ ಒಡೆತನದ ರಿಲಯನ್ಸ್‌ಗೆ ಡೊಮೈನ್‌ ವಿಚಾರವಾಗಿ ಚಿಂತೆಯು ಇತ್ತು. ಇದಕ್ಕೆ ಕಾರಣ ಜಿಯೊ ಮತ್ತು ಡಿಸ್ನಿ+ ಎರಡು ಕಂಪನಿಯ ವಿಲೀನ ಪ್ರಕ್ರಿಯೆ ಮುನ್ನ ದೆಹಲಿ ಮೂಲದ ವಿದ್ಯಾರ್ಥಿಯೊಬ್ಬ jiohotstar.com ಡೊಮೈನ್‌ ಅನ್ನು ಖರೀದಿಸಿದ್ದ. ನಂತರ ಈತ ಉನ್ನತ ವ್ಯಾಸಂಗಕ್ಕೆ ಕೇಳಿದಷ್ಟು ಹಣ ನೀಡಿದರೆ ನಿಮಗೆ ವರ್ಗಾಯಿಸುತ್ತೇನೆ ಎಂದು ರಿಲಯನ್ಸ್‌ ಕಂಪನಿಗೆ ಹಣದ ಬೇಡಿಕೆ ಇಟ್ಟಿದ್ದ.

ಮುಂದಾಗುವ ಸಾವಲುಗಳನ್ನು ಚಿಂತಿಸಿದ ಜಿಯೊ ಕಂಪನಿಯ ಈತನ ಬೇಡಿಕೆಯನ್ನು ತಿರಸ್ಕರಿಸಿತ್ತು. ಆನಂತರ ಆ ವಿದ್ಯಾರ್ಥಿ ದುಬೈನಲ್ಲಿರುವ ಭಾರತ ಮೂಲದ ಜೈನಾಮ್‌ ಜೈನ್(‌13) ಜೈವಿಕಾ ಜೈನ್(10) ಎಂಬ ಚಿಣ್ಣರಿಗೆ jiohotstar.com ಡೊಮೈನ್‌ ಅನ್ನು ಮಾರಿದ್ದ.

ಇದೀಗ ಈ ಚಿಣ್ಣರು jiohotstar.com ಡೊಮೈನ್‌ ಅನ್ನು ರಿಲಯನ್ಸ್‌ ಕಂಪನಿಗೆ ಉಚಿತವಾಗಿ ನೀಡಲು ನಿರ್ಧರಿಸಿದ್ದಾರೆ. ಈ ಕುರಿತು ವಿಡಿಯೊ ಹಂಚಿಕೊಂಡಿರುವ ಅವರು, ರಿಲಯನ್ಸ್‌ ಐಪಿ ಲೀಗಲ್‌ ಟೀಮ್‌ ನಮ್ಮನ್ನು ಸಂಪರ್ಕಿಸಿದೆ. ಈ ಸಂಬಂಧ ಒಪ್ಪಂದಗಳಿಗೆ ಸಹಿಹಾಕಲು ಮುಂಬೈಗೆ ಬರಲಿದ್ದೇವೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ನಮ್ಮಿಂದ ಅವರಿಗೆ ಸಹಾಯವಾಗಲಿ ಎಂದಷ್ಟೇ ನಾವು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಈ ಇಬ್ಬರು ಚಿಣ್ಣರು ದುಬೈನಲ್ಲಿ ಶೈಕ್ಷಣಿಕ ಸಂಬಂಧ ಚಾರಿಟಿ ನಡೆಸುತ್ತಿದದ್ದು, ಸೇವಾ ಆರ್ಮಿ ಎಂಬ ವೆಬ್‌ಸೈಟ್‌ ಅನ್ನು ಸಹ ಇದಕ್ಕಾಗಿ ರೂಪಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

3 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

3 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

4 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago