jiohotstar.com ಡೊಮೈನ್ ಉಚಿತವಾಗಿ ರಿಲಯನ್ಸ್‌ಗೆ ವರ್ಗ

ಹೊಸದಿಲ್ಲಿ: jiohotstar.com ಡೊಮೈನ್ ಅನ್ನು ದುಬೈನಲ್ಲಿರುವ ಭಾರತೀಯ ಮೂಲದ ಚಿಣ್ಣರು ರಿಲಯನ್ಸ್‌ಗೆ ಉಚಿತವಾಗಿ ವರ್ಗಾಯಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಜಿಯೊ ಸಿನಿಮಾ ಮತ್ತು ಡಿಸ್ನಿ+ಹಾಟ್‌ಸ್ಟಾರ್‌ ಒತ್ತೀಚೆಗೆ ಒಗ್ಗೂಡಿತ್ತು. ಬಳಿಕ ಜಿಯೊ ಒಡೆತನದ ರಿಲಯನ್ಸ್‌ಗೆ ಡೊಮೈನ್‌ ವಿಚಾರವಾಗಿ ಚಿಂತೆಯು ಇತ್ತು. ಇದಕ್ಕೆ ಕಾರಣ ಜಿಯೊ ಮತ್ತು ಡಿಸ್ನಿ+ ಎರಡು ಕಂಪನಿಯ ವಿಲೀನ ಪ್ರಕ್ರಿಯೆ ಮುನ್ನ ದೆಹಲಿ ಮೂಲದ ವಿದ್ಯಾರ್ಥಿಯೊಬ್ಬ jiohotstar.com ಡೊಮೈನ್‌ ಅನ್ನು ಖರೀದಿಸಿದ್ದ. ನಂತರ ಈತ ಉನ್ನತ ವ್ಯಾಸಂಗಕ್ಕೆ ಕೇಳಿದಷ್ಟು ಹಣ ನೀಡಿದರೆ ನಿಮಗೆ ವರ್ಗಾಯಿಸುತ್ತೇನೆ ಎಂದು ರಿಲಯನ್ಸ್‌ ಕಂಪನಿಗೆ ಹಣದ ಬೇಡಿಕೆ ಇಟ್ಟಿದ್ದ.

ಮುಂದಾಗುವ ಸಾವಲುಗಳನ್ನು ಚಿಂತಿಸಿದ ಜಿಯೊ ಕಂಪನಿಯ ಈತನ ಬೇಡಿಕೆಯನ್ನು ತಿರಸ್ಕರಿಸಿತ್ತು. ಆನಂತರ ಆ ವಿದ್ಯಾರ್ಥಿ ದುಬೈನಲ್ಲಿರುವ ಭಾರತ ಮೂಲದ ಜೈನಾಮ್‌ ಜೈನ್(‌13) ಜೈವಿಕಾ ಜೈನ್(10) ಎಂಬ ಚಿಣ್ಣರಿಗೆ jiohotstar.com ಡೊಮೈನ್‌ ಅನ್ನು ಮಾರಿದ್ದ.

ಇದೀಗ ಈ ಚಿಣ್ಣರು jiohotstar.com ಡೊಮೈನ್‌ ಅನ್ನು ರಿಲಯನ್ಸ್‌ ಕಂಪನಿಗೆ ಉಚಿತವಾಗಿ ನೀಡಲು ನಿರ್ಧರಿಸಿದ್ದಾರೆ. ಈ ಕುರಿತು ವಿಡಿಯೊ ಹಂಚಿಕೊಂಡಿರುವ ಅವರು, ರಿಲಯನ್ಸ್‌ ಐಪಿ ಲೀಗಲ್‌ ಟೀಮ್‌ ನಮ್ಮನ್ನು ಸಂಪರ್ಕಿಸಿದೆ. ಈ ಸಂಬಂಧ ಒಪ್ಪಂದಗಳಿಗೆ ಸಹಿಹಾಕಲು ಮುಂಬೈಗೆ ಬರಲಿದ್ದೇವೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ನಮ್ಮಿಂದ ಅವರಿಗೆ ಸಹಾಯವಾಗಲಿ ಎಂದಷ್ಟೇ ನಾವು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಈ ಇಬ್ಬರು ಚಿಣ್ಣರು ದುಬೈನಲ್ಲಿ ಶೈಕ್ಷಣಿಕ ಸಂಬಂಧ ಚಾರಿಟಿ ನಡೆಸುತ್ತಿದದ್ದು, ಸೇವಾ ಆರ್ಮಿ ಎಂಬ ವೆಬ್‌ಸೈಟ್‌ ಅನ್ನು ಸಹ ಇದಕ್ಕಾಗಿ ರೂಪಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago