jiohotstar.com ಡೊಮೈನ್ ಉಚಿತವಾಗಿ ರಿಲಯನ್ಸ್‌ಗೆ ವರ್ಗ

ಹೊಸದಿಲ್ಲಿ: jiohotstar.com ಡೊಮೈನ್ ಅನ್ನು ದುಬೈನಲ್ಲಿರುವ ಭಾರತೀಯ ಮೂಲದ ಚಿಣ್ಣರು ರಿಲಯನ್ಸ್‌ಗೆ ಉಚಿತವಾಗಿ ವರ್ಗಾಯಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಜಿಯೊ ಸಿನಿಮಾ ಮತ್ತು ಡಿಸ್ನಿ+ಹಾಟ್‌ಸ್ಟಾರ್‌ ಒತ್ತೀಚೆಗೆ ಒಗ್ಗೂಡಿತ್ತು. ಬಳಿಕ ಜಿಯೊ ಒಡೆತನದ ರಿಲಯನ್ಸ್‌ಗೆ ಡೊಮೈನ್‌ ವಿಚಾರವಾಗಿ ಚಿಂತೆಯು ಇತ್ತು. ಇದಕ್ಕೆ ಕಾರಣ ಜಿಯೊ ಮತ್ತು ಡಿಸ್ನಿ+ ಎರಡು ಕಂಪನಿಯ ವಿಲೀನ ಪ್ರಕ್ರಿಯೆ ಮುನ್ನ ದೆಹಲಿ ಮೂಲದ ವಿದ್ಯಾರ್ಥಿಯೊಬ್ಬ jiohotstar.com ಡೊಮೈನ್‌ ಅನ್ನು ಖರೀದಿಸಿದ್ದ. ನಂತರ ಈತ ಉನ್ನತ ವ್ಯಾಸಂಗಕ್ಕೆ ಕೇಳಿದಷ್ಟು ಹಣ ನೀಡಿದರೆ ನಿಮಗೆ ವರ್ಗಾಯಿಸುತ್ತೇನೆ ಎಂದು ರಿಲಯನ್ಸ್‌ ಕಂಪನಿಗೆ ಹಣದ ಬೇಡಿಕೆ ಇಟ್ಟಿದ್ದ.

ಮುಂದಾಗುವ ಸಾವಲುಗಳನ್ನು ಚಿಂತಿಸಿದ ಜಿಯೊ ಕಂಪನಿಯ ಈತನ ಬೇಡಿಕೆಯನ್ನು ತಿರಸ್ಕರಿಸಿತ್ತು. ಆನಂತರ ಆ ವಿದ್ಯಾರ್ಥಿ ದುಬೈನಲ್ಲಿರುವ ಭಾರತ ಮೂಲದ ಜೈನಾಮ್‌ ಜೈನ್(‌13) ಜೈವಿಕಾ ಜೈನ್(10) ಎಂಬ ಚಿಣ್ಣರಿಗೆ jiohotstar.com ಡೊಮೈನ್‌ ಅನ್ನು ಮಾರಿದ್ದ.

ಇದೀಗ ಈ ಚಿಣ್ಣರು jiohotstar.com ಡೊಮೈನ್‌ ಅನ್ನು ರಿಲಯನ್ಸ್‌ ಕಂಪನಿಗೆ ಉಚಿತವಾಗಿ ನೀಡಲು ನಿರ್ಧರಿಸಿದ್ದಾರೆ. ಈ ಕುರಿತು ವಿಡಿಯೊ ಹಂಚಿಕೊಂಡಿರುವ ಅವರು, ರಿಲಯನ್ಸ್‌ ಐಪಿ ಲೀಗಲ್‌ ಟೀಮ್‌ ನಮ್ಮನ್ನು ಸಂಪರ್ಕಿಸಿದೆ. ಈ ಸಂಬಂಧ ಒಪ್ಪಂದಗಳಿಗೆ ಸಹಿಹಾಕಲು ಮುಂಬೈಗೆ ಬರಲಿದ್ದೇವೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ನಮ್ಮಿಂದ ಅವರಿಗೆ ಸಹಾಯವಾಗಲಿ ಎಂದಷ್ಟೇ ನಾವು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಈ ಇಬ್ಬರು ಚಿಣ್ಣರು ದುಬೈನಲ್ಲಿ ಶೈಕ್ಷಣಿಕ ಸಂಬಂಧ ಚಾರಿಟಿ ನಡೆಸುತ್ತಿದದ್ದು, ಸೇವಾ ಆರ್ಮಿ ಎಂಬ ವೆಬ್‌ಸೈಟ್‌ ಅನ್ನು ಸಹ ಇದಕ್ಕಾಗಿ ರೂಪಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

10 mins ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

59 mins ago

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

1 hour ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

2 hours ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago